ನೆಹರೂ ಮ್ಯೂಸಿಯಂ ಸಮಿತಿಗೆ ಅರ್ನಾಬ್
Team Udayavani, Nov 4, 2018, 6:00 AM IST
ಹೊಸದಿಲ್ಲಿ: ನೆಹರು ಮ್ಯೂಸಿಯಂ ಹಾಗೂ ಲೈಬ್ರರಿ ಸೊಸೈಟಿಗೆ ಕೇಂದ್ರ ಸರಕಾರವು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸೇರಿದಂತೆ ನಾಲ್ವರು ಸದಸ್ಯರನ್ನು ನೇಮಿಸಿದೆ. ನವದಿಲ್ಲಿಯಲ್ಲಿರುವ ನೆಹರು ಮ್ಯೂಸಿಯಂನಲ್ಲಿ ಎಲ್ಲ ಪ್ರಧಾನಿಗಳ ಮ್ಯೂಸಿಯಂ ಅನ್ನು ನಿರ್ಮಿಸಬೇಕೆಂಬ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ವಿರೋಧಿಸಿದ್ದ ನಾಲ್ವರ ಬದಲಿಗೆ ಇವರನ್ನು ನೇಮಿಸಲಾಗಿದೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಬಿಜೆಪಿ ಸಂಸದ ವಿನಯ್ ಸಹಸ್ರಬುದ್ಧೆ ಐಜಿಎನ್ಸಿಎ ಮುಖ್ಯಸ್ಥ ರಾಮ್ ಬಹಾದುರ್ ರೈ ಕೂಡ ಸಮಿತಿಗೆ ಸದಸ್ಯರಾಗಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬಳಿಕ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಎಂ.ಜೆ.ಅಕºರ್ ಈ ಸಮಿತಿಯ ಉಪಾಧ್ಯಕ್ಷರಾಗಿಯೇ ಮುಂದುವರಿಯಲಿದ್ದಾರೆ.
ಆರ್ಥಿಕ ತಜ್ಞ ನಿತಿನ್ ದೇಸಾಯಿ, ಪ್ರೊಫೆಸರ್ ಉದಯನ್ ಮಿಶ್ರಾ, ಮಾಜಿ ಹಿರಿಯ ಅಧಿಕಾರಿ ಬಿ.ಪಿ ಸಿಂಗ್ ಹಾಗೂ ಪ್ರತಾಪ್ ಭಾನು ಮೆಹ್ತಾ ಅವರ ಸ್ಥಾನಕ್ಕೆ ಈ ಹೊಸ ಸದಸ್ಯರು ನೇಮಕಗೊಂಡಿದ್ದಾರೆ. ಹೊಸದಾಗಿ ನೇಮಕವಾದ ಸದಸ್ಯರು 2020ರ ವರೆಗೆ ಕಾರ್ಯನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.