ಶಶಿ ತರೂರ್ ವಾರಂಟ್ ಗೊಂದಲ
Team Udayavani, Dec 23, 2019, 12:54 AM IST
ತಿರುವನಂತಪುರ: ಕಾಂಗ್ರೆಸ್ ಸಂಸದ, ಖ್ಯಾತ ಲೇಖಕ ಶಶಿ ತರೂರ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂಬ ಮಾಧ್ಯಮ ವರದಿ ಗೊಂದಲ ಸೃಷ್ಟಿಸಿದೆ. ಸ್ವತಃ ಶಶಿ ತರೂರ್ ಈ ಬಗ್ಗೆ ಪ್ರತಿಕ್ರಿಯಿಸಿ, ನಿರ್ದಿಷ್ಟ ಸ್ಥಳೀಯ ನ್ಯಾಯಾಲಯಕ್ಕೆ ಈ ಬಗ್ಗೆ ಸ್ಪಷ್ಟನೆ ಕೇಳಲಾಗುವುದೆಂದು ತಿಳಿಸಿದ್ದಾರೆ. ತರೂರ್ ಬರೆದ ದಿ ಗ್ರೇಟ್ ಇಂಡಿಯನ್ ನಾವೆಲ್ ಕಾದಂಬರಿ 1989ರಲ್ಲಿ ಪ್ರಕಟವಾಗಿತ್ತು.
ಅದರಲ್ಲಿ ನಾಯರ್ ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಕೇರಳ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಸಂಧ್ಯಾ, ಈ ವರ್ಷ ಎಪ್ರಿಲ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಿ.21ರೊಳಗೆ ಹಾಜರಾಗಬೇಕು ಎಂಬ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲಾಗಿದೆ, ಆದ್ದರಿಂದ ಬಂಧನಕ್ಕೆ ಸೂಚಿಸಲಾಗಿದೆಯೆಂದು ವರದಿಯಾಗಿದೆ. ಆದರೆ ತನಗೆ ನೀಡಿರುವ ಸಮನ್ಸ್ನಲ್ಲಿ ಯಾವ ದಿನಾಂಕವೆಂದು ಸೂಚಿಸಿಯೇ ಇಲ್ಲವೆಂದು ತರೂರ್ ತಿಳಿಸಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?