QR ಕೋಡ್ ನ ನಕಲಿ ಗುರುತಿನ ಚೀಟಿಯೊಂದಿಗೆ ಲೋಕಲ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಬಂಧನ


Team Udayavani, Aug 21, 2020, 4:30 PM IST

QR ಕೋಡ್ ನ ನಕಲಿ ಗುರುತಿನ ಚೀಟಿಯೊಂದಿಗೆ ಲೋಕಲ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಬಂಧನ

ಮುಂಬಯಿ: ಕ್ಯೂಆರ್‌ ಕೋಡ್‌ ಹೊಂದಿರುವ ನಕಲಿ ಗುರುತಿನ ಚೀಟಿ ಬಳಸಿಕೊಂಡು ಉಪನಗರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 21ರ ಹರೆಯದ ಯುವತಿಯನ್ನು ಬಂಧಿಸಲಾಗಿದೆ ಎಂದು ಸರಕಾರಿ ರೈಲ್ವೇ ಪೊಲೀಸ್‌ (ಜಿಆರ್‌ಪಿ) ಶುಕ್ರವಾರ ತಿಳಿಸಿದೆ.

ನೆರೆಯ ಪಾಲ್ಗಾರ್‌ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಯುವತಿಯನ್ನು ಗುರುವಾರ ಪಶ್ಚಿಮ ರೈಲ್ವೇಯ ಬೊರಿವಲಿ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದಕ್ಷಿಣ ಮುಂಬಯಿಯ ಮರೀನ್‌ ಲೈನ್ ನಲ್ಲಿರುವ ಎಲೆಕ್ಟ್ರಾನಿಕ್‌ ಅಂಗಡಿಯಲ್ಲಿ ಈ ಯುವತಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ತುರ್ತು ಮತ್ತು ಅಗತ್ಯ ಸೇವೆಗಳ ಸಿಬಂದಿಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ನೌಕರರು ಮತ್ತು ಎಂಬಿಪಿಟಿಯಂತಹ ಕೆಲವು ಇತರ ಕೇಂದ್ರ ಸರಕಾರಿ ಸಂಸ್ಥೆಗಳಿಗೆ ಮಾತ್ರ ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿದೆ. ಇದನ್ನು ಖಚಿತಪಡಿಸಿಕೊಳ್ಳಲು ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅರ್ಹರಿಗೆ ಮಹಾರಾಷ್ಟ್ರ ಸರಕಾರದ ಕಡೆಯಿಂದ ಕ್ಯೂಆರ್‌ ಕೋಡ್‌ ಹೊಂದಿರುವ ಹೊಸ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ; ಬಡತನ, ಅವಮಾನಗಳ ಬೆಂಕಿಯ ನಡುವೆ ಅರಳಿದ ಚಿನ್ನದ ಹೂವು: ಪಿ.ಟಿ ಉಷಾ ಗೋಲ್ಡನ್ ಜರ್ನಿ

ಮೂಲಗಳ ಪ್ರಕಾರ, ಯುವತಿಯು ವಿರಾರ್‌ ಮತ್ತು ಚರ್ಚ್‌ಗೇಟ್‌ ನಡುವೆ ಜುಲೈ 19 ರಿಂದ ಆಗಸ್ಟ್‌ 18 ರವರೆಗಿನ ಎರಡನೇ ದರ್ಜೆಯ ಮಾಸಿಕ ಸೀಸನ್‌ ಟಿಕೆಟ್‌ ಹೊಂದಿದ್ದಳು. ಬೊರಿವಲಿ ನಿಲ್ದಾಣದಲ್ಲಿ ಟಿಕೆಟ್‌ ತಪಾಸಕ ಅದನ್ನು ಪರೀಕ್ಷಿಸಿದಾಗ ಆಕೆಯ ಗುರುತಿನ ಚೀಟಿ ನಕಲಿ ಎಂದು ತಿಳಿದುಬಂದಿದೆ. ಕ್ಯೂಆರ್‌ ಕೋಡ್‌ ಹೊಂದಿರುವ ನಕಲಿ ಗುರುತಿನ ಚೀಟಿಯನ್ನು ಬಿಎಂಸಿ ನೌಕರರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಟಿಕೆಟ್‌ ತಪಾಸಕ ಕೋಡ್‌ ಅನ್ನು ಸ್ಕ್ಯಾನ್‌ ಮಾಡಿದಾಗ ಅದು ಅಧಿಕೃತ ಚೀಟಿ ಅಲ್ಲ ಎಂದು ತಿಳಿದು ಬಂದಿದೆ.  ಆದ್ದರಿಂದ ರೈಲ್ವೇ ಸಿಬಂದಿ ಆಕೆಯನ್ನು ಜಿಆರ್‌ಪಿಗೆ ಹಸ್ತಾಂತರಿಸಿದರು. ಆಕೆ ನಕಲಿ ಗುರುತಿನ ಚೀಟಿಯನ್ನು ಹೇಗೆ ಪಡೆದಳು ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಕೆಯ ವಿರುದ್ಧ ಐಪಿಸಿಯ ಸೆಕ್ಷನ್‌ 420 (ಮೋಸ), 465 (ಖೋಟಾ), 468 (ಮೋಸ ಮಾಡುವ ಉದ್ದೇಶದಿಂದ ದಾಖಲೆಗಳ ನಕಲು ಮಾಡುವಿಕೆ) ಮತ್ತು 471ರ (ನಕಲಿ ದಾಖಲೆಯನ್ನು ಅಸಲಿ ದಾಖಲೆಯಾಗಿ ಬಳಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.