ಇತರ ರಾಜ್ಯಗಳಿಗೆ ವಿರೋಧಾತ್ಮಕವಾಗಿರುವ 35ಎ, 370ನೇ ವಿಧಿ ರದ್ದಾಗಬೇಕು: ಜಸ್ಟಿಸ್‌ ಹೆಗ್ಡೆ


Team Udayavani, Apr 16, 2019, 3:36 PM IST

Santosh-Hegde-730

ಹೈದರಾಬಾದ್‌ : ಸಂವಿಧಾನದ 35ಎ ಮತ್ತು 370ನೇ ವಿಧಿಗಳು ಇತರ ರಾಜ್ಯಗಳ ಹಕ್ಕುಗಳಿಗೆ ವಿರೋಧಾತ್ಮಕವಾಗಿರುವುದರಿಂದ ಅವುಗಳನ್ನು ಕಿತ್ತು ಹಾಕುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಾಧೀಶ ಜಸ್ಟಿಸ್‌ ಎನ್‌ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.

‘1948ರಲ್ಲಿ ಕಾಶ್ಮೀರದ ಮಹಾರಾಜ ತನ್ನ ರಾಜ್ಯವನ್ನು ಭಾರತದೊಂದಿಗೆ ವಿಲಯನಗೊಳಿಸುವ ಸಂದರ್ಭದಲ್ಲಿ ಆ ರಾಜ್ಯದ ಜನತೆಗೆ ಕೆಲವೊಂದು ಭರವಸೆಗಳನ್ನು ನೀಡಿ ಸಂವಿಧಾನದಲ್ಲಿ 35ಎ ಮತ್ತು 370ನೇ ವಿಧಿಯನ್ನು ಸೇರಿಸಲಾಗಿತ್ತು’ ಎಂದವರು ಮಾಧ್ಯಮದೊಂದಿಗೆ ಹೇಳಿದರು.

‘ಈ ವಿಧಿಗಳಲ್ಲಿ ಬಳಸಲಾಗಿರುವ ಪದಗಳು ಈ ಭರವಸೆ  ಶಾಶ್ವತ ಎನ್ನುವ ರೀತಿಯಲ್ಲಿವೆ; ಆದರೆ ಅನಂತರದಲ್ಲಿ ದೇಶದಲ್ಲಾಗಿರುವ ಬದಲಾವಣೆಗಳು ಮತ್ತು ಸಂಭವಿಸಿರುವ ವಿದ್ಯಮಾನಗಳಿಂದ ಈ ವಿಧಿಗಳು ಮುಂದುವರಿಯುವುದು ಅಸಾಧವಾಗಿವೆ. ಕಾಶ್ಮೀರವು ದೇಶದ ಅವಿಭಾಜ್ಯ ಅಂಗ ಎನ್ನುವುದಾದಲ್ಲಿ ಇತರ ರಾಜ್ಯಗಳೊಡನೆ ಹೋಲಿಸುವಾಗ ಅದಕ್ಕೆ ಪ್ರತ್ಯೇಕ ಸ್ಥಾನಮಾನ ಇರುವಂತಿಲ್ಲ’  ಎಂದು ಹೆಗ್ಡೆ ಹೇಳಿದರು.

‘ಇವತ್ತಿನ ಸಂದರ್ಭದಲ್ಲಿ ಜಮ್ಮು ಕಾಶ್ಮೀರಕ್ಕಿರುವ ಈ ವಿಶೇಷ ಸ್ಥಾನಮಾನದಿಂದಾಗಿ ದೇಶವು ಸಮಗ್ರವಾಗಿ ಮತ್ತು ಏಕವಾಗಿ ಇರುವುದಕ್ಕೆ ಹಲವಾರು ಸಮಸ್ಯೆಗಳು ಉಂಟಾಗುತ್ತವೆ. ಆದುದರಿಂದ ಸಂವಿಧಾನದಲ್ಲಿ ಈ ವಿಧಿಗಳು ಮುಂದುವರಿಯುವುದು ಅಸಾಧ್ಯ ಎಂದು ನನಗನ್ನಿಸುತ್ತದೆ’ ಎಂದು ಹೆಗ್ಡೆ ಹೇಳಿದರು.

‘ಆದುದರಿಂದ ಇಂದಿನ ಪರಿಸ್ಥಿತಿಯಲ್ಲಿ 35ಎ ಮತ್ತು 370ನೇ ವಿಧಿಯನ್ನು ರದ್ದು ಮಾಡುವುದೇ ಸೂಕ್ತ. ಏಕೆಂದರೆ ಈ ಕಾಯಿದೆಯಡಿ ಜಮ್ಮು ಕಾಶ್ಮೀರಕ್ಕೆ ಇರುವ ಸ್ವಾಯತ್ತೆಯು ಇತರ ರಾಜ್ಯಗಳ ಹಕ್ಕುಗಳಿಗೆ ವಿರೋಧಾತ್ಮಕವಾಗಿವೆ. ಜಮ್ಮು ಕಾಶ್ಮೀರ ಭಾರತ ಅವಿಭಾಜ್ಯ ಅಂಗವೆಂದಾದಲ್ಲಿ ಅದಕ್ಕೆ ಇತರ ರಾಜ್ಯಗಳಂತೆ ಸಮಾನ ಸ್ಥಾನಮಾನ ಇರಬೇಕಾಗುತ್ತದೆ’ ಎಂದು ಹೆಗ್ಗೆ ಹೇಳಿದರು.

‘ಈಗಾಗಲೇ 70 ವರ್ಷಗಳು ಸಂದು ಹೋಗಿವೆ; 35ಎ ಮತ್ತು 370ನೇ ವಿಧಿಗಳ ಉದ್ದೇಶ ಈ ಅವಧಿಯಲ್ಲಿ ಈಡೇರಿದೆ. ಈಗ ಕಾಶ್ಮೀರ, ಭಾರತದ ಅವಿಭಾಜ್ಯ ಅಂಗ ಅಲ್ಲ ಎಂದು ಹೇಳುವಂತಿಲ್ಲ. ಆದುದರಿಂದ ಈ ಎರಡು ವಿಧಿಗಳಿಗೆ ಸಂವಿಧಾನದಲ್ಲಿ ಯಾವುದೇ ಸ್ಥಾನ ಇರಲಾಗದು’ ಎಂದವರು ಹೇಳಿದರು.

ಸಂವಿಧಾನದ 370ನೇ ವಿಧಿಯು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತದೆ ಮತ್ತು 35ಎ ವಿಧಿಯು ಈ ರಾಜ್ಯದಲ್ಲಿ ಹೊರಗಿನವರು ಭೂಮಿ, ಆಸ್ತಿಪಾಸ್ತಿ ಖರೀದಿಸುವುದನ್ನು ನಿಷೇಧಿಸುತ್ತದೆ.

ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾನು ಅಧಿಕಾರ ಉಳಿಸಿಕೊಂಡಲ್ಲಿ ಈ ಎರಡು ವಿಧಿಗಳನ್ನು ರದ್ದು ಮಾಡುವ ಭರವಸೆಯನ್ನು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.