ನೂತನ ಬಿಜೆಪಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಬೇಡಿ; ಪ್ರಧಾನಿಗೆ ಜೇಟ್ಲಿ
Team Udayavani, May 29, 2019, 1:59 PM IST
ನವದೆಹಲಿ:ನೂತನ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ. ಎನ್ ಡಿಎ ಸರ್ಕಾರದಲ್ಲಿ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ನನಗೀಗ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ಸಂಪುಟ ಸೇರಲು ನಾನು ಅಸಹಾಯಕನಾಗಿದ್ದೇನೆ ಎಂದು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಜೇಟ್ಲಿ ಅವರು ಈ ಪತ್ರ ಬರೆದಿದ್ದಾರೆ. ಪಕ್ಷ ನನಗೆ ಪ್ರತಿಬಾರಿ ಜವಾಬ್ದಾರಿಯನ್ನು ನೀಡಿ ಆಶೀರ್ವದಿಸಿದೆ. ಮೊದಲ ಬಾರಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷ ಸಂಘಟನೆ, ವಿರೋಧ ಪಕ್ಷದಲ್ಲಿದ್ದಾಗಲೂ ನನಗೆ ಜವಾಬ್ದಾರಿ ನೀಡಿದೆ.
ಆರೋಗ್ಯ ಮತ್ತು ಟ್ರೀಟ್ ಮೆಂಟ್ ಗೆ ಹೆಚ್ಚಿನ ಗಮನ ಕೊಡಬೇಕಾದ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಸರ್ಕಾರದಲ್ಲಿ ತನಗೆ ಯಾವುದೇ ಸಚಿವ ಸ್ಥಾನ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜೇಟ್ಲಿ ಅವರು ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.
I have today written a letter to the Hon’ble Prime Minister, a copy of which I am releasing: pic.twitter.com/8GyVNDcpU7
— Arun Jaitley (@arunjaitley) May 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA