ಜೇಟ್ಲಿ ಅಸ್ತಂಗತ; ಹಿರಿಯ ಬಿಜೆಪಿ ಧುರೀಣ ಅರುಣ್ ಜೇಟ್ಲಿ ನಿಮಗೆಷ್ಟು ಗೊತ್ತು?


Team Udayavani, Aug 24, 2019, 1:07 PM IST

Jailrly

ಬಿಜೆಪಿಯ ಹಿರಿಯ ಧುರೀಣ ಅರುಣ್ ಜೇಟ್ಲಿ ಶನಿವಾರ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೇಂದ್ರ ವಿತ್ತ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಜೇಟ್ಲಿ ಅವರು ಪ್ರಧಾನಿ ಮೋದಿ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿದ್ದರು. ಈ ನಿಟ್ಟಿನಲ್ಲಿ ಜೇಟ್ಲಿ ವ್ಯಕ್ತಿಚಿತ್ರಣ ಇಲ್ಲಿದೆ….

ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಲ್ಲೊಬ್ಬರಾದ ಅರುಣ್‌ ಜೇಟ್ಲಿಯವರು ಕೇಂದ್ರ ಹಣಕಾಸು ಸಚಿವರಾಗಿ ಪ್ರಸಿದ್ಧರಾದವರು. ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ನ ಮಂಡಳಿ ಸದಸ್ಯರಾಗಿಯೂ ಇದ್ದರು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ, ಸಹಾಯಕ ಸಾಲಿಸಿಟರ್‌ ಜನರಲ್‌ ಆಗಿ ವಕೀಲ ವೃಂದದಲ್ಲೂ ಖ್ಯಾತನಾಮರು.

ಬಿಜೆಪಿಯಲ್ಲಿ ಎರಡು ಬಾರಿ ಮುಖ್ಯ ಕಾರ್ಯದರ್ಶಿಯಾಗಿ ಕರ್ತವ್ಯ ನಿಭಾಯಿಸಿದ್ದಾರೆ. 2002 ಮತ್ತು 2004ರಲ್ಲಿ ಅವರು ಈ ಹುದ್ದೆ ನಿಭಾಯಿಸಿದ್ದು, ಬಳಿಕ 2009ರಲ್ಲಿ ರಾಜೀನಾಮೆನೀಡಿದ್ದರು. ಕಾರಣ ಆ ಹೊತ್ತಿಗೆ ಅವರು ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದು, ಬಿಜೆಪಿಯ ಒಬ್ಬರಿಗೆ ಒಂದೇ ಹುದ್ದೆ ನಿಯಮಕ್ಕೆ ಅನ್ವಯವಾಗಿ ಹುದ್ದೆ ಬಿಟ್ಟಿದ್ದರು. ಬಿಜೆಪಿಯ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಮಿತಿಯಲ್ಲಿ ಯಾವತ್ತೂ ಇರುತ್ತಿದ್ದ ಜೇಟ್ಲಿ, ತಾವು ಮುಖ್ಯ ಕಾರ್ಯದರ್ಶಿಯಾಗಿದ್ದ ವೇಳೆ ಬಿಜೆಪಿ 8 ವಿಧಾನಸಭೆ ಚುನಾವಣೆಗಳಲ್ಲಿ ಗೆಲುವಿನ ನಗೆಯನ್ನು ಕಂಡವರು. 2012ರಲ್ಲಿ ಅವರು ಮೂರನೇ ಬಾರಿಗೆ ರಾಜ್ಯಸಭೆಗೆ ಮರು ಆಯ್ಕೆಯಾಗಿದ್ದರು. ಇದರೊಂದಿಗೆ ಬಿಸಿಸಿಐನ ಉಪಾಧ್ಯಕ್ಷರಾಗಿದ್ದು, ಐಪಿಎಲ್‌ ನಂತರದಲ್ಲಿ ಸ್ಪಾಟ್‌ ಫಿಕ್ಸಿಂಗ್‌ ಹಗರಣದ ಬಳಿಕ ಆ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಜೇಟ್ಲಿ ಎಲ್ಲಿಯವರು?

ಜೇಟ್ಲಿ ಮೂಲತಃ ದಿಲ್ಲಿಯವರೇ. ಅವರದ್ದು ವಕೀಲರ ಕುಟುಂಬ. ಜತೆಗೆ ಸಮಾಜ ಸೇವೆಯಲ್ಲೂ ಹೆಸರಿತ್ತು. ದಿಲ್ಲಿಯ ನಾರಾಯಣ ವಿಹಾರದಲ್ಲಿ ಅವರು ಬೆಳೆದಿದ್ದರು. ಅವರ ತಂದೆ ಮಹಾರಾಜ ಕಿಶನ್‌ ಜೇಟ್ಲಿ, ತಾಯಿ  ರತ್ನ ಪ್ರಭಾ. ತಾಯಿಯೂ ಒಬ್ಟಾಕೆ ಸಮಾಜಿಕ ಕಾರ್ಯಕರ್ತೆಯಾಗಿದ್ದವರು. ಜೇಟ್ಲಿ ತಮ್ಮ ಶಾಲಾ ವ್ಯಾಸಂಗವನ್ನು 1957-69ರವರೆಗೆ ಸೈಂಟ್‌ ಕ್ಸೇವಿಯರ್‌ ಶಾಲೆಯಲ್ಲಿ ಪಡೆದಿದ್ದರು.

ಶಾಲಾ ದಿನಗಳಲ್ಲಿ ನಾಯಕತ್ವದ ಗುಣ, ಚರ್ಚೆ ಭಾಷಣಗಳಲ್ಲಿ ಮುಂದಿದ್ದರು. ಕ್ರಿಕೆಟ್‌ ಅವರ ಇಷ್ಟದ ಆಟ. ಶ್ರೀರಾಮ ಕಾಲೇಜಿನಲ್ಲಿ ಅವರು ಪದವಿಯನ್ನು ಪಡೆದಿದ್ದು, ವಾಣಿಜ್ಯ ಪದವಿ ಪಡೆದಿದ್ದು. ಆಗಲೂ ಚರ್ಚಾ ಕೂಟಗಳಲ್ಲಿ ಮಿಂಚುತ್ತಿದ್ದರು. ಜತೆಗೆ ವಿದ್ಯಾರ್ಥಿ ನಾಯಕನಾಗಿಯೂ ಇದ್ದರು. 1973-77ರ ಅವಧಿಯಲ್ಲಿ ಅವರು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡಿದ್ದರು. 1982ರಲ್ಲಿ ಅವರು ಸಂಗೀತಾ ಅವರನ್ನು ವಿವಾಹವಾಗಿದ್ದು, 1983ರಲ್ಲಿ ಸೊನಾಲಿ, 1989ರಲ್ಲಿ ರೋಹನ್‌ಗೆ ಅಪ್ಪನಾಗಿದ್ದರು.

ವಕೀಲರಾಗಿ 

1977ರಲ್ಲಿ ಜೇಟ್ಲಿ ಅವರು ವಕೀಲ ವೃತ್ತಿಗೆ ತೊಡಗಿಕೊಂಡಿದ್ದು, ಕೆಳ ಹಂತದ ನ್ಯಾಯಾಲಯದಿಂದ ಕ್ರಮೇಣವಾಗಿ ಹೈಕೋರ್ಟ್‌,  ಸುಪ್ರೀಂ ಕೋರ್ಟ್‌ವರೆಗೆ ಹೋದರು. 1990ರಿಂದ ಅವರು ಸುಪ್ರೀಂ ಕೋರ್ಟ್‌ ವಕೀಲರಾಗಿದ್ದರು. ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೂಡ ಆಗಿದ್ದರು. ಇದೇ ಅವಧಿಯಲ್ಲಿ ಬೋಫೋರ್ ಪ್ರಕರಣ ಕೋರ್ಟ್‌ನಲ್ಲಿದ್ದು, ಆ ಪ್ರಕರಣದಲ್ಲೂ ವಾದಿಸಿದ್ದರು. ಹಲವು ಪ್ರಮುಖ ಪ್ರಕರಣಗಳಲ್ಲಿ ವಾದ ನಡೆಸುವ ಮೂಲಕ ಅಪಾರ ಅನುಭವ ಹೊಂದಿದ್ದರು.

ರಾಜಕಾರಣಿಯಾಗಿ 

ಬಾಲ್ಯದಿಂದಲೇ ಜೇಟ್ಲಿಯವರಿಗೆ ರಾಜಕೀಯ ಮತ್ತು ಕಾನೂನು ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇತ್ತು. ಈ ಕಾರಣದಿಂದ ಅವರು ಎಬಿವಿಪಿ ಸೇರಿಕೊಂಡು ಆ ಮೂಲಕ ದಿಲ್ಲಿ ವಿವಿ ವಿದ್ಯಾರ್ಥಿ ಸಂಘದ ನಾಯಕನೂ ಆಗಿದ್ದರು. ಇದೇ ಅವರನ್ನು ರಾಜಕೀಯದ ವೇದಿಕೆಗೆ ಕರೆ ತಂದಿತು. ಬಳಿಕ ಅವರು ಜಯಪ್ರಕಾಶ್‌ ನಾರಾಯಣ್‌ ಅವರ ಹೋರಾಟಗಳನ್ನು ಹತ್ತಿರದಿಂದ ಕಂಡಿದ್ದು, ಭ್ರಷ್ಟಾಚಾರ ವಿರೋಧಿ ಇತ್ಯಾದಿ ಹೋರಾಟಗಳನ್ನು ತೊಡಗಿಸಿಕೊಂಡಿದ್ದರು.

ಜೇಟ್ಲಿ ಅವರಿಗೆ ಜೆಪಿ ಅವರೇ ಒಂದರ್ಥದಲ್ಲಿ ರಾಜಕೀಯ ಗುರು. 1975ರಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದಾಗ ಜೇಟ್ಲಿ ಅವರೂ ಪ್ರಬಲವಾಗಿ ವಿರೋಧಿಸಿದರು. ಈ ಕಾರಣದಿಂದ 19 ತಿಂಗಳು ಅವರು ತಿಹಾರ್‌ ಜೈಲಿನಲ್ಲಿ ಜೈಲುವಾಸ ಅನುಭವಿಸಿದರು. 1977ರ ಚುನಾವಣೆ ವೇಳೆ ಅವರು ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕಾಂಗ್ರೆಸ್‌ ಸೋಲಿಗೆ ಕೆಲಸ ಮಾಡಿದ್ದರು. ಆಗ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಿದ್ದು, ಲೋಕ ತಾಂತ್ರಿಕ ಯುವ ಮೋರ್ಚಾದ ಸಂಚಾಲಕರಾಗಿ ಕೆಲಸ ಮಾಡಿದರು. ಆದರೆ ಲೋಕಸಭೆಗೆ ಆಯ್ಕೆಯಾಗುವ ಅವರ ಕನಸು ಕೈಗೂಡಿರಲಿಲ್ಲ. 2014ರಲ್ಲಿ ಅಮೃತಸರದಿಂದ ಸ್ಪರ್ಧಿಸಿದರೂ, ಕಾಂಗ್ರೆಸ್‌ ಅಭ್ಯರ್ಥಿ ಅಮರೀಂದರ್‌ ಸಿಂಗ್‌ ವಿರುದ್ಧ ಸೋತಿದ್ದರು.

ಕೇಂದ್ರ ಸಚಿವರಾಗಿ 

ಕೇಂದ್ರ ಕಾನೂನು ಸಚಿವರಾಗಿ ಜೇಟ್ಲಿ ತಮ್ಮ ಅನುಭವ ಧಾರೆಯೆರೆದಿದ್ದರು. ಅವರ ಅವಧಿಯಲ್ಲಿ ಚುನಾವಣೆ, ನ್ಯಾಯಾಂಗಕ್ಕೆ ಸಂಬಂಧ ಪಟ್ಟಂತೆ ಮಹತ್ವದ ಕಾನೂನುಗಳು ಜಾರಿಯಾಗಿದ್ದವು. ತ್ವರಿತ ನ್ಯಾಯಾಲಯಗಳ ಸ್ಥಾಪನೆ ಅವರ ಸಚಿವರಾಗಿದ್ದ ಅವಧಿಯಲ್ಲೇ ಆಗಿತ್ತು.

ವಕೀಲರ ಕಲ್ಯಾಣ ನಿಧಿ, ಹೂಡಿಕೆದಾರರ ಸಂರಕ್ಷಣಾ ನಿಧಿ ಸ್ಥಾಪನೆಗೆ ಕಾರಣರಾಗಿದ್ದರು. ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯನ್ನೂ ತಂದಿದ್ದರು. ಉತ್ತರಾಖಂಡ, ಜಾರ್ಖಂಡ್‌, ಛತ್ತೀಸ್‌ಗಢದಲ್ಲಿ ಹೈಕೋರ್ಟ್‌ಗಳ ಸ್ಥಾಪನೆ, ಪಕ್ಷಾಂತರ ತಡೆ ಕಾಯ್ದೆ ಇವರದ್ದೇ ಅವಧಿಯಲ್ಲಿ ಹೊರತರಲಾಗಿತ್ತು. ಹಣಕಾಸು ಸಚಿವರಾಗಿದ್ದಾಗ ಜಿಎಸ್‌ಟಿ, ನೋಟು ನಿಷೇಧದಂತಹ ಮಹತ್ವದ ತೀರ್ಮಾನಗಳ ಹಿಂದೆ ಜೇಟ್ಲಿ ಇದ್ದರು. ಡಿಜಿಟಲ್‌ ಪಾವತಿ ಉತ್ತೇಜನಕ್ಕೆ ಹೆಚ್ಚಿನ ಕೆಲಸ ಮಾಡಿದ್ದರು. ಬ್ಯಾಂಕುಗಳ ವಿಲೀನಕ್ಕೂ ಕೆಲಸ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸರಕಾರ ರೂಪಿಸಿದ ಪ್ರತಿಯೊಂದು ಪ್ರಮುಖ ನಿರ್ಧಾರದ ಹಿಂದೆ ಜೇಟ್ಲಿ ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.