Delhi ಸರ್ಕಾರ ಉರುಳಿಸಲು 7 ಆಪ್ ಶಾಸಕರಿಗೆ ಬಿಜೆಪಿ ಗಾಳ.. 25 ಕೋಟಿ ಆಮಿಷ: ಕೇಜ್ರಿವಾಲ್ ಆರೋಪ
Team Udayavani, Jan 27, 2024, 12:08 PM IST
ನವದೆಹಲಿ: ತಮ್ಮ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ದೆಹಲಿ ಸರ್ಕಾರವನ್ನು ಕೆಡವಲು ದೊಡ್ಡ ಮಟ್ಟದ ಪಿತೂರಿ ನಡೆಸಲಾಗುತ್ತಿದೆ ಜೊತೆಗೆ ನಮ್ಮ ಪಕ್ಷದ ಏಳು ಶಾಸಕರಿಗೆ ಭಾರತೀಯ ಜನತಾ ಪಕ್ಷಕ್ಕೆ ಸೇರಲು 25 ಕೋಟಿ ರೂಗಳ ಆಮಿಷ ಒಡ್ಡಲಾಗಿದೆ ಎಂದು ಶನಿವಾರ ಹೇಳಿದ್ದಾರೆ.
ಅಲ್ಲದೆ ಸಾಮಾಜಿಕ ಜಾಲತಾಣ ಟ್ವಿಟರ್ X ನಲ್ಲಿ ಬರೆದಿರುವಂತೆ ಈಗಾಗಲೇ ನಾನು ನನ್ನ ಪಕ್ಷದ ಏಳು ಮಂದಿ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಈ ವೇಳೆ ತಿಳಿದ ವಿಚಾರವೇನೆಂದರೆ ಮುಂದಿನ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗುವುದು ಇದಾದ ಬಳಿಕ ಶಾಶಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯವನ್ನು ನಾವು ನಡೆಸುವುದಾಗಿ ಬಿಜೆಪಿ ತಯಾರಿ ನಡೆಸಿದೆ ಎಂದು ಬರೆದುಕೊಂಡಿದ್ದಾರೆ.
ಇದರ ಮುಂದುವರೆದ ಭಾಗವಾಗಿ ಆಪ್ ನ ಇಪ್ಪತ್ತೊಂದು ಶಾಸಕರನ್ನು ಬಿಜೆಪಿ ಸಂಪರ್ಕ ಮಾಡಿದ್ದು ಅವರಿಗೆ ೨೫ ಕೋಟಿ ಆಮಿಷ ನೀಡಲಾಗಿದೆ. ಬಿಜೆಪಿಗೆ ಸೇರಿದ ಶಾಸಕರಿಗೆ ಪಕ್ಷದಿಂದ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಹೇಳಿಕೊಂಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಬಿಜೆಪಿ ಸಂಪರ್ಕಿಸಿದ ಏಳು ಶಾಸಕರು ಬಿಜೆಪಿ ಸೇರಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ. ಇದರಿಂದಲೇ ಅರ್ಥವಾಗುತ್ತೆ ಇಡಿ ಅಧಿಕಾರಿಗಳು ನನಗೆ ನೀಡಿದ ಸಮನ್ಸ್ ಹಿಂದೆ ಯಾರ ಕೈವಾಡ ಇದೆ ಎಂಬುದು ಇದು ಕೇವಲ ನನ್ನ ವಿಚರೆಣೆಗೆ ಅಲ್ಲ ಬದಲಾಗಿ ನನ್ನನ್ನು ಚುನಾವಣೆಯಿಂದ ದೂರ ಉಳಿಯುವಂತೆ ಮಾಡಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ.
पिछले दिनों इन्होंने हमारे दिल्ली के 7 MLAs को संपर्क कर कहा है – “कुछ दिन बाद केजरीवाल को गिरफ़्तार कर लेंगे। उसके बाद MLAs को तोड़ेंगे। 21 MLAs से बात हो गयी है। औरों से भी बात कर रहे हैं। उसके बाद दिल्ली में आम आदमी पार्टी की सरकार गिरा देंगे। आप भी आ जाओ। 25 करोड़ रुपये देंगे…
— Arvind Kejriwal (@ArvindKejriwal) January 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ