ಗೋವಾ ಟ್ಯಾಕ್ಸಿ ಚಾಲಕರಿಗೆ 4 ವಿಶೇಷ ಯೋಜನೆ ಘೋಷಿಸಿದ ಕೇಜ್ರಿವಾಲ್
Team Udayavani, Nov 17, 2021, 5:28 PM IST
ಪಣಜಿ: ಅಟೊ/ಟ್ಯಾಕ್ಸಿ ಚಾಲಕರಿಗಾಗಿ ಮಹಾಮಂಡಳ ಸ್ಥಾಪನೆ ಮಾಡಲಾಗುವುದು, ಚಾಲಕರಿಗೆ ಅಪಘಾತವಾದರೆ ವೈದ್ಯಕೀಯ ಖರ್ಚನ್ನು ಸರ್ಕಾರ ಭರಿಸಲಿದೆ, ಫೆಸ್ಲೆಸ್ ಆಟಿಒ ಸೇವೆ, ಡಿಜಿಟಲ್ ಮೀಟರ್ ಅಳವಡಿಕೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟಿನಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿರಿವಾಲ್ ಹೇಳಿದರು.
ಬುಧವಾರ ದಾಬೋಲಿಂನ ಸಭೆಯಲ್ಲಿ ಮಾತನಾಡಿರುವ ಅವರು, ಗೋವಾ ಟ್ಯಾಕ್ಸಿ ಚಾಲಕರಿಗಾಗಿ 4 ಹೊಸ ಘೋಷಣೆಯನ್ನು ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಳವಾರ ಗೋವಾಕ್ಕೆ ಆಗಮಿಸಿದ್ದು ಗೋವಾದಲ್ಲಿ ಪಕ್ಷ ಸಂಘಟನೆ ಮತ್ತು ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಗೋವಾದಲ್ಲಿ ಫೆಬ್ರವರಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ವಿವಿಧ ರಾಜಕೀಯ ಪಕ್ಷಗಳು ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿವೆ. ಗೋವಾದಲ್ಲಿ ಸರ್ಕಾರ ಸ್ಥಾಪನೆ ಮಾಡುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಕೂಡ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಗೋವಾದ ಎಲ್ಲ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಸ್ಫರ್ಧಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ