Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ
Team Udayavani, May 27, 2024, 9:46 AM IST
ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯಲ್ಲಿ ತಮ್ಮ ಆರೋಗ್ಯದ ಸಮಸ್ಯೆಯನ್ನು ಮುಂದಿಟ್ಟು ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ, ಆದ್ದರಿಂದ ಈ ಎಲ್ಲ ಪರೀಕ್ಷೆಯನ್ನು ಮಾಡಲು ಇನ್ನೂ 7 ದಿನಗಳ ಕಾಲಾವಕಾಶ ಬೇಕಾಗಿದೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಪರವಾಗಿ ಸಲ್ಲಿಸಿದ ಅರ್ಜಿಯಲ್ಲಿ, ಬಂಧನದ ನಂತರ ಮುಖ್ಯಮಂತ್ರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು ಜೊತೆಗೆ ಕೆಲವು ಗಂಭೀರ ಕಾಯಿಲೆಯ ಲಕ್ಷಣಗಳನ್ನು ಹೊಂದಿರಬಹುದು. ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ಅವರನ್ನು ಪರೀಕ್ಷಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಪರೀಕ್ಷಿಸಿದ ನಂತರ, ವೈದ್ಯರು ಅವರಿಗೆ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಹಲವಾರು ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ ಎಂದು ಹೇಳಿದ್ದಾರೆ ಎಂದು ಆಪ್ ಹೇಳಿಕೊಂಡಿದೆ.
ಕೇಜ್ರಿವಾಲ್ ಅವರು ಮಾರ್ಚ್ 21 ರಂದು ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದರು, ಇದಾದ ಬಳಿಕ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದ ನಂತರ ಮೇ 10 ರಂದು ಬಿಡುಗಡೆಯಾದರು.
ಇದನ್ನೂ ಓದಿ: IT Raid: ನಾಸಿಕ್ನ ಸುರಾನಾ ಜ್ಯುವೆಲ್ಲರ್ಸ್ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್
Goa Calangute Beach: ಮೊಬೈಲ್,ಬ್ಯಾಗ್ ಕಳ್ಳತನ; ಮೂವರ ಬಂಧನ
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.