ಕಮಲ್ಗೆ ಆಪ್ತನಾದ ಕೇಜ್ರಿ:ತಮಿಳುನಾಡು ರಾಜಕೀಯದಲ್ಲಿ ಸಂಚಲನ
Team Udayavani, Sep 21, 2017, 3:03 PM IST
ಚೆನ್ನೈ: ರಾಜಕೀಯ ಪ್ರವೇಶಿಸಲು ಸಿದ್ಧತೆ ನಡೆಸಿಕೊಂಡಿರುವ ಹಿರಿಯ ನಟ ಕಮಲಹಾಸನ್ ಅವರನ್ನು ದೆಹಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿ ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಗುರುವಾರ ಚೆನ್ನೈನ ಅಲ್ವಾರ್ಪೇಟ್ನಲ್ಲಿರುವ ಕಮಲ ಹಾಸನ್ ನಿವಾಸದಲ್ಲಿ ಇಬ್ಬರ ಭೇಟಿ ನಡೆದಿದ್ದು ಸಹಭೋಜನ ಸ್ವೀಕರಿಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ಕಮಲ್ ಹಾಸನ್ ಓರ್ವ ಸಮಗ್ರತೆ ಮತ್ತು ಧೈರ್ಯವಿರವ ವ್ಯಕ್ತಿ. ದೇಶ ಭ್ರಷ್ಟಾಚಾರ ಮತ್ತು ಕೋಮುವಾದವನ್ನು ಎದುರಿಸುತ್ತಿದ್ದು, ಎಲ್ಲಾ ರೀತಿಯ ಮನಸ್ಸಿನ ಜನರು ಒಂದಾಗಿ ಮಾತನಾಡಬೇಕಾಗಿದೆ. ಇಬ್ಬರು ಫಲಪ್ರದ ಮಾತುಕತೆ ನಡೆಸಿದ್ದೇವೆ’ ಎಂದರು.
ಕಮಲಹಾಸನ್ ಮಾತನಾಡಿ ‘ಕೇಜ್ರಿವಾಲ್ ಅವರು ನನ್ನನ್ನು ಭೇಟಿಯಾಗಲು ಬಯಸಿದ್ದರು . ಉದ್ದೇಶ ಒಂದೇ , ಭ್ರಷ್ಟಾಚಾರ ವಿರೋಧಿಸಿ. ರಾಜಕೀಯಸ್ಥಿತಿಗತಿಯನ್ನು ಅರಿಯಲು ನಾವು ಮಾತುಕತೆ ನಡೆಸಿದ್ದೇವೆ. ಇದು ನನಗೆ ರಾಜಕೀಯ ಕಲಿಕೆಯ ತಿರುವು’ ಎಂದಿದ್ದಾರೆ.
ಕಮಲಹಾಸನ್ ಅವರು ಆಪ್ ಸೇರ್ಪಡೆಯಾಗುತ್ತಾರೋ, ಇಲ್ಲ ಹೊಸ ಪಕ್ಷ ಹುಟ್ಟು ಹಾಕಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳುತ್ತಾರೋ ಎನ್ನುವ ಕೂತುಹಲ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ