ಜೇಟ್ಲಿಯ ಕ್ಷಮೆ ಕೇಳಲಿರುವ ಸಿಎಂ ಅರವಿಂದ ಕೇಜ್ರಿವಾಲ್
Team Udayavani, Mar 16, 2018, 7:30 AM IST
ನವದೆಹಲಿ: ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈಗ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಹಲವು ಮುಖಂಡರ ವಿರುದ್ಧ 20ಕ್ಕೂ ಹೆಚ್ಚು ಮಾನನಷ್ಟ ಮೊಕದ್ದಮೆಗಳು ದಾಖಲಾಗಿದ್ದು, ಇವುಗಳನ್ನು ನಿವಾರಿಸಿಕೊಳ್ಳಲು ಕ್ಷಮೆ ಕೋರಲಿದೆ. ಪಕ್ಷದ ಮುಖಂಡರ ವಿರುದ್ಧ ಹಲವು ಮಾನನಷ್ಟ ಮೊಕದ್ದಮೆಗಳಿದ್ದು, ಇವು ವಿಪರೀತ ಸಮಯ ಹಾಳು ಮಾಡುತ್ತಿವೆ ಮತ್ತು ವೆಚ್ಚದಾಯಕವೂ ಆಗಿವೆ ಎಂಬುದರಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದೆ. ಪಂಜಾಬ್ ಚುನಾವಣೆ ವೇಳೆ ಸಚಿವ ಬಿಕ್ರಮ್ ಮಜಿತಿಯಾ ಮಾದಕ ವಸ್ತುಗಳ ಆರೋಪಿ ಎಂದು ಕೇಜ್ರಿವಾಲ್ ದೂರಿದ್ದರು. ಅವರ ಬಗ್ಗೆಯೂ ಕ್ಷಮೆ ಕೋರಿದ ಪತ್ರವನ್ನು ದೆಹಲಿ ಸಿಎಂ ಕೋರ್ಟ್ಗೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ