ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಜ್ರಿವಾಲ್ ಗೆ ಗೃಹಬಂಧನ? ಆರೋಪ ನಿರಾಕರಿಸಿದ ಪೊಲೀಸರು
Team Udayavani, Dec 8, 2020, 1:04 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇದೀಗ ಮತ್ತೊಂದು ಸ್ವರೂಪ ಪಡೆದಿದೆ. ರೈತರ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಆದರೆ ದಿಲ್ಲಿ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ವಕ್ತಾರ ಸೌರಭ್ ಭಾರದ್ವಾಜ್ ಈ ಬಗ್ಗೆ ಆರೋಪಿಸಿದ್ದು, ಸೋಮವಾರ ಸಿಎಂ ಅರವಿಂದ ಕೇಜ್ರಿವಾಲ್ ಅವರು ದಿಲ್ಲಿಯ ಸಿಂಘು ಭಾಗಕ್ಕೆ ತೆರಳಿ ಪ್ರತಿಭಟನಾ ನಿರತರನ್ನು ಭೇಟಿಯಾಗಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರದ ಸೂಚನೆಯಂತೆ ಅವರನ್ನು ಪೊಲೀಸರು ಗೃಹಬಂಧನಕ್ಕೆ ಒಳಪಡಿಸಿದ್ದಾರೆ. ಯಾರಿಗೂ ಸಿಎಂ ಮನೆಯ ಒಳಗೆ ಅಥವಾ ಹೊರಗೆ ಹೋಗಲು ಅವಕಾಶ ನೀಡಲಾಗಿಲ್ಲ. ಸಿಎಂ ಕೇಜ್ರಿವಾಲ್ ಅವರ ಮಂಗಳವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.
ಇಡೀ ದೇಶವೇ ರೈತರಿಗೆ ಬೆಂಬಲವಾಗಿ ನಿಂತು ಭಾರತ್ ಬಂದ್ ಮಾಡುತ್ತಿದ್ದರೆ, ಸಿಎಂ ಅರವಿಂದ ಕೇಜ್ರಿವಾಲ್ ಅವರು ಯಾರನ್ನೂ ಭೇಟಿಯಾಗದಂತೆ ತಡೆಯಲು ಕೇಂದ್ರ ಗೃಹ ಸಚಿವಾಲ ಪೊಲೀಸರಿಗೆ ಸೂಚಿಸಿದೆ. ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಕೇಜ್ರಿವಾಲ್ ಪ್ರತಿಭಟನಾ ನಿರತರನ್ನು ಭೇಟಿಯಾದ ಕ್ರಮದಿಂದ ಕೇಂದ್ರ ಸರ್ಕಾರ ಭಯಭೀತವಾಗಿದೆ ಎಂದು ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಇದನ್ನೂ ಓದಿ:ರೈತರ ಆದಾಯ ದ್ವಿಗುಣಗೊಳಿಸಲು ಕಾಯ್ದೆಗಳಿಗೆ ತಿದ್ದುಪಡಿ ಮಾಡಲಾಗಿದೆ: ಬಿ.ವೈ.ರಾಘವೇಂದ್ರ
ಆದರೆ ದಿಲ್ಲಿ ಪೊಲೀಸರು ಈ ಆರೋಪನ್ನು ತಳ್ಳಿಹಾಕಿದ್ದಾರೆ. ಸಿಎಂ ಗೃಹ ಬಂಧನ ಆರೋಪ ತಪ್ಪು ಎಂದಿದ್ದಾರೆ. ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿಲ್ಲ. ಅವರು ಮನೆಯಿಂದ ಹೊರಗೆ ಹೋಗಲು ಸ್ವತಂತ್ರರು. ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಉತ್ತರ ದಿಲ್ಲಿಯ ಡಿಸಿಪಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..