ಉದ್ಧವ್ ಠಾಕ್ರೆ ಜತೆ ಅಮಿತ್ ಶಾ ಭೇಟಿ
Team Udayavani, Jun 7, 2018, 6:40 AM IST
ಮುಂಬಯಿ/ಲಕ್ನೋ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂಬೈನಲ್ಲಿ ಬುಧವಾರ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜತೆಗೆ ಮಾತುಕತೆ ನಡೆಸಿದರು. 2019ರ ಚುನಾವಣೆಗಾಗಿ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿರುವ ಬಿಜೆಪಿ, ಮಿತ್ರಪಕ್ಷ ಶಿವಸೇನೆ ಎತ್ತಿರುವ ಪ್ರಶ್ನೆಗಳಿಗೆ ಸೂಕ್ತ ಉತ್ತರ ಕಂಡುಕೊಳ್ಳುವುದಾಗಿ ಹೇಳಿದೆ. ಶಾ-ಠಾಕ್ರೆ ಭೇಟಿ ವೇಳೆ ರಾಮ ಮಂದಿರ ನಿರ್ಮಾಣ ವಿಚಾರ ಏನಾಯಿತು ಎಂದು ಕೇಳಿದ್ದಾಗಿ ಹಲವು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೂ ಮುನ್ನ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ಅಮಿತ್ ಶಾ ಭೇಟಿಯ ಬಗ್ಗೆ ವ್ಯಂಗ್ಯವಾಡಿ ಸಂಪಾದಕೀಯ ಬರೆಯಲಾಗಿತ್ತು.
ಈ ನಡುವೆ ತಮ್ಮ ‘ಸಮರ್ಥನೆಗಾಗಿ ಸಂಪರ್ಕ’ ಎಂಬ ಅಭಿಯಾನದ ಪ್ರಯುಕ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶಾ ಉದ್ಯಮಿ ರತನ್ ಟಾಟಾ ಹಾಗೂ ನಟಿ ಮಾಧುರಿ ದೀಕ್ಷಿತ್ರನ್ನು ಭೇಟಿ ಮಾಡಿದ್ದಾರೆ. ಗಾಯಕಿ ಲತಾ ಮಂಗೇಶ್ಕರ್ರನ್ನು ಭೇಟಿ ಮಾಡಲು ಷಾ ನಿರ್ಧರಿಸಿದ್ದರಾದರೂ, ಲತಾ ಅನಾರೋಗ್ಯದಿಂದಾಗಿ ಭೇಟಿ ರದ್ದಾಗಿದೆ. ಇದೇ ವೇಳೆ ಗುರುವಾರ ಚಂಡೀಗಢದಲ್ಲಿ ಅಕಾಲಿ ದಳ ನಾಯಕರನ್ನು ಮತ್ತು ಕ್ರೀಡಾ ಕ್ಷೇತ್ರದ ಪ್ರಮುಖರನ್ನು ಭೇಟಿಯಾಗಲಿದ್ದಾರೆ.
ಮೈತ್ರಿಗೆ ಸಿದ್ಧ: ಮುಂದಿನ ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದು ಎಸ್.ಪಿ. ನಾಯಕ ಅಖೀಲೇಶ್ ಯಾದವ್ ಹೇಳಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆ ಜತೆಗೆ ಉತ್ತರ ಪ್ರದೇಶದಲ್ಲಿಯೂ ವಿಧಾನಸಭೆ ಚುನಾವಣೆ ನಡೆಸಲು ಬಿಜೆಪಿಗೆ ಅವರು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ