ಭಾರೀ ಹಿಮಗಾಳಿ: ದೆಹಲಿ ನಿವಾಸಿಗಳಿಗೆ ಆರೆಂಜ್ ಅಲರ್ಟ್, ಪಂಜಾಬ್ ಗೆ ರೆಡ್ ಅಲರ್ಟ್ ಘೋಷಣೆ
ದಟ್ಟ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ವಿವರಿಸಿದೆ.
Team Udayavani, Dec 29, 2020, 3:35 PM IST
ನವದೆಹಲಿ:ಉತ್ತರ ಭಾರತದಾದ್ಯಂತ ಭಾರೀ ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದೆಹಲಿ-ಎನ್ ಸಿಆರ್ ಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹಾಗೂ ಪಂಜಾಬ್ ಗೆ ರೆಡ್ ಅಲರ್ಟ್ ಘೋಷಿಸಿದೆ.
ಡಿಸೆಂಬರ್ 31 ಹಾಗೂ ಜನವರಿ 1ರಂದು ರಕ್ತಹೆಪ್ಪುಗಟ್ಟಿಸುವಂತಹ ಶೀತ ಗಾಳಿ ಬೀಸಲಿರುವ ನಿಟ್ಟಿನಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಅನ್ನು ಕೂಡಾ ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ.
ಮುಂದಿನ ನಾಲ್ಕೈದು ದಿನಗಳ ಕಾಲ ಪಂಜಾಬ್, ಹರ್ಯಾಣ, ಚಂಡೀಗಢ್, ದೆಹಲಿ ಹಾಗೂ ಉತ್ತರಾಖಂಡ್ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದ ದಟ್ಟ ಮಂಜಿನ ವಾತಾವರಣ ಇರಲಿದೆ. ಮುಂದಿನ ಮೂರು ದಿನಗಳ ಕಾಲ ಉತ್ತರಪ್ರದೇಶದಲ್ಲಿ ಹಾಗೂ ಎರಡು ದಿನಗಳ ಕಾಲ ರಾಜಸ್ಥಾನದಲ್ಲಿ ದಟ್ಟ ಮಂಜಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ವಿವರಿಸಿದೆ.
ಇದನ್ನೂ ಓದಿ:ಚಿಗರಿಗೆ ಗುಂಡು ಹಾರಿಸಿದ ಇಬ್ಬರ ಸೆರೆ : ಬಂಧಿತರಿಂದ 28 ಜೀವಂತ ಗುಂಡುಗಳು ವಶಕ್ಕೆ
ಗ್ಗೆ 8.30ಕ್ಕೆ ಸಫ್ದರ್ ಜಂಗ್ ನಲ್ಲಿ ದಾಖಲೆಯ 3.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮುಂದಿನ 24 ಗಂಟೆಗಳ ಕಾಲ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗುವ ಸಾಧ್ಯತೆ ಇದ್ದಿರುವುದಾಗಿ ಐಎಂಡಿ ತಿಳಿಸಿದೆ.ಮುಂದಿನ ನಾಲ್ಕು ದಿನಗಳ ಕಾಲ ದೆಹಲಿಯ ವಿವಿಧೆಡೆ ಭರ್ಜರಿ ಚಳಿ ಗಾಳಿ ಬೀಸಲದೆ ಎಂದು ಹವಾಮಾನ ಇಲಾಖೆ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ