ನಗದು ಕೊರತೆ ಇಲ್ಲ: ಜೇಟ್ಲಿ


Team Udayavani, Apr 18, 2018, 5:30 AM IST

No-cash-14-4.jpg

ಹೊಸದಿಲ್ಲಿ: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕ ಸಹಿತ ದೇಶದ ಹಲವು ರಾಜ್ಯಗಳ ಎಟಿಎಂ ಕೇಂದ್ರಗಳಲ್ಲಿ ‘ನಗದು ಇಲ್ಲ’ (ನೋ ಕ್ಯಾಶ್‌) ಎಂಬ ಫ‌ಲಕಗಳು ಕಾಣಿಸಿಕೊಂಡಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ, ಇದೊಂದು ತಾತ್ಕಾಲಿಕ ಸಮಸ್ಯೆ. ಮೂರು ದಿನಗಳಲ್ಲಿ ಪರಿಹಾರವಾಗಲಿದೆ ಎಂದಿದ್ದಾರೆ. ಕೇಂದ್ರ ಆರ್ಥಿಕ ವ್ಯವಹಾರಗಳ ಖಾತೆ ಕಾರ್ಯದರ್ಶಿ ಎಸ್‌.ಸಿ. ಗರ್ಗ್‌ ಕೂಡ ಪ್ರತಿಕ್ರಿಯಿಸಿದ್ದು, 500 ರೂ. ಮುಖಬೆಲೆ ನೋಟುಗಳನ್ನು ಮುದ್ರಿಸುವ ಕಾರ್ಯವನ್ನು ಈಗಿನದ್ದಕ್ಕಿಂತ ಐದು ಪಟ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ನಗದು ಕೊರತೆ 
ಕೆಲವು ವಾರಗಳ ಹಿಂದೆ ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಎಟಿಎಂಗಳಿಗೆ ನಗದು ಪೂರೈಕೆಯಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಪರಿಸ್ಥಿತಿ ಸರಿಪಡಿಸಲಾಗಿತ್ತು. ಸೋಮವಾರ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಬಿಹಾರಗಳಲ್ಲೂ ನಗದು ಪೂರೈಕೆಗೆ ಸಮಸ್ಯೆಯಾಗಿದೆ. ಇದು ಸುದ್ದಿಯಾಗುತ್ತಿದ್ದಂತೆ, ಪ್ರತಿಕ್ರಿಯಿಸಿರುವ ಸಚಿವ ಜೇಟ್ಲಿ ‘ಕೇಂದ್ರಕ್ಕೆ ಪರಿಸ್ಥಿತಿಯ ಅರಿವಿದೆ. ಇನ್ನು ಮೂರು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 3 ತಿಂಗಳಿಂದ ನಗದಿಗೆ ಹೆಚ್ಚಿನ ಬೇಡಿಕೆ ಇತ್ತು. ಈ ತಿಂಗಳ ಮೊದಲ 13 ದಿನಗಳಲ್ಲಿ ದೇಶಾದ್ಯಂತ 45 ಸಾವಿರ ಕೋ. ರೂ. ಮೌಲ್ಯದಷ್ಟು ಹೆಚ್ಚಿನ ಪ್ರಮಾಣದ ನಗದು ಪೂರೈಸಿದ್ದೇವೆ. ಆಂಧ್ರ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಬಿಹಾರಗಳಿಂದ ನಗದಿಗೆ ಹೆಚ್ಚಿನ ಬೇಡಿಕೆ ಬಂದಿದ್ದರಿಂದ ಪರಿಸ್ಥಿತಿ ಹೀಗಾಗಿದೆ’ ಎಂದಿದ್ದಾರೆ.ಸರಕಾರದ ಬಳಿ ಸಾಕಷ್ಟು ನಗದು ಇದೆ. 500 ರೂ., 200 ರೂ., 100 ರೂ. ನೋಟುಗಳ ಸಂಗ್ರಹವೂ ಸಾಕಷ್ಟಿದೆ. ಹೀಗಾಗಿ ಜನ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಕೇಂದ್ರ ಹಣಕಾಸು ಸಚಿವಾಲಯ ಕೂಡ ಎಟಿಎಂಗಳಲ್ಲಿ ನಗದು ಕೊರತೆ ಇದೆ ಎಂಬ ಅಂಶವನ್ನು ಒಪ್ಪಿಕೊಂಡಿದೆ.

ಹೆಚ್ಚಲಿದೆ ಐದು ಪಟ್ಟು: ನೋಟು ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 500 ರೂ. ನೋಟುಗಳ ಮುದ್ರಣವನ್ನು ಪ್ರತಿ ದಿನ ಐದು ಪಟ್ಟು ಹೆಚ್ಚಿಸಲಿದೆ. ಮುಂದಿನ ಕೆಲವು ದಿನಗಳಲ್ಲಿ ದಿನಕ್ಕೆ 2,500 ಕೋಟಿ 500 ರೂ. ನೋಟುಗಳನ್ನು ಪೂರೈಸಲಿದ್ದೇವೆ ಎಂದು ಆರ್ಥಿಕ ಕಾರ್ಯದರ್ಶಿ ಎಸ್‌.ಸಿ. ಗರ್ಗ್‌ ಹೇಳಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಅದರ ಸಂಖ್ಯೆ 70 ರಿಂದ 75 ಸಾವಿರ ಕೋಟಿಗೆ ಏರಲಿದೆ ಎಂದಿದ್ದಾರೆ.

ಸಮಸ್ಯೆ ಎದುರಿಸಲು ಸಮಿತಿ: ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಶಿವಪ್ರತಾಪ್‌ ಶುಕ್ಲಾ ಮಾತನಾಡಿ, ಯಾವ ರಾಜ್ಯಗಳಲ್ಲಿ ನಗದು ಪೂರೈಕೆ ಕೊರತೆ ಇದೆಯೋ ಅಲ್ಲಿನ ಸಮಸ್ಯೆ ಎದುರಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದೆ. ಮುಂದಿನ 2-3 ದಿನಗಳಲ್ಲಿ ಸಮಸ್ಯೆ ಇತ್ಯರ್ಥವಾಗಲಿದೆ. ಜತೆಗೆ RBI ಕೂಡ ನಗದು ವರ್ಗಾವಣೆ ಮೇಲುಸ್ತುವಾರಿಗಾಗಿ ಸಮಿತಿ ರಚಿಸಿದೆ ಎಂದಿದ್ದಾರೆ.

ಹಲವು ರಾಜ್ಯಗಳ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ ಎಂಬ ವರದಿ ನೋಟು ಅಪಮೌಲ್ಯದ ದಿನಗಳನ್ನು ಮತ್ತೆ ನೆನಪಿಸುತ್ತಿದೆ.
– ಮಮತಾ ಬ್ಯಾನರ್ಜಿ, ಪ.ಬಂ.  ಸಿಎಂ

ನಗದು ಕೊರತೆಯಿಲ್ಲ. 
ದೇಶದ ಹಲವು ಭಾಗಗಳಲ್ಲಿ ಬೆಳೆ ಕೊಯ್ಲು ಆರಂಭವಾಗಿರುವುದರಿಂದ ನಗದು ಬೇಡಿಕೆ ಹೆಚ್ಚಿ ಸಮಸ್ಯೆ ಆಗಿದೆ.
– ರಜನೀಶ್‌ ಕುಮಾರ್‌, ಎಸ್‌ಬಿಐ ಅಧ್ಯಕ್ಷ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.