ಫಲಾನುಭವಿಗಳು ಬಯಸುವವರೆಗೂ ಮೀಸಲಾತಿ ಇರಬೇಕು: ಆರೆಸ್ಸೆಸ್
Team Udayavani, Sep 10, 2019, 5:00 AM IST
ಪುಷ್ಕರ್: ಫಲಾನುಭವಿಗಳು ಎಲ್ಲಿಯವರೆಗೆ ತಮಗೆ ಮೀಸಲಾತಿ ಅಗತ್ಯವಿದೆ ಎಂದು ಭಾವಿಸುತ್ತಾರೋ, ಅಲ್ಲಿಯವರೆಗೂ ಮೀಸಲಾತಿ ಮುಂದು ವರಿಯಬೇಕು ಎಂದು ಆರೆಸ್ಸೆಸ್ ಹೇಳಿದೆ.
ರಾಜಸ್ಥಾನದ ಪುಷ್ಕರ್ನಲ್ಲಿ ನಡೆದ 3 ದಿನಗಳ ಸಮನ್ವಯ ಸಭೆಯ ಕೊನೇ ದಿನವಾದ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೆಸ್ಸೆಸ್ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ‘ಸಮಾಜದಲ್ಲಿ ಇನ್ನೂ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಮುಂದುವರಿದಿದೆ. ಹಾಗಾಗಿ ಮೀಸಲಾತಿಯ ಅಗತ್ಯವಿದೆ. ಸಂವಿಧಾನದಲ್ಲಿ ಪ್ರಸ್ತಾಪಿಸಲಾಗಿರುವ ಮೀಸಲಾತಿಗೆ ನಮ್ಮ ಸಂಪೂರ್ಣ ಬೆಂಬಲವಿದೆ.
ಫಲಾನುಭವಿಗಳು ಬಯಸುವವರೆಗೂ ಮೀಸಲಾತಿ ಮುಂದುವರಿಯಬೇಕು’ ಎಂದು ಹೇಳಿದ್ದಾರೆ. ಅಲ್ಲದೆ, ದೇವಾಲಯಗಳು, ರುದ್ರಭೂಮಿಗಳು ಹಾಗೂ ಜಲಾಶಯಗಳು ಯಾವುದೇ ನಿರ್ದಿಷ್ಟ ಜಾತಿಗೆ ಸೀಮಿತವಾಗಿರದೇ, ಅವುಗಳು ಎಲ್ಲರ ಬಳಕೆಗೂ ಮುಕ್ತವಾಗಬೇಕು ಎನ್ನುವುದು ಸಂಘದ ಅಭಿಪ್ರಾಯ ಎಂದೂ ಹೊಸಬಾಳೆ ನುಡಿದಿದ್ದಾರೆ. ಇತ್ತೀಚೆಗಷ್ಟೇ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಮೀಸಲಾತಿಯ ಫಲಾನುಭವಿಗಳು ಹಾಗೂ ಮೀಸಲಾತಿ ಪಡೆಯದೇ ಇರುವವರ ನಡುವೆ ಸಾಮರಸ್ಯದಿಂದ ಕೂಡಿದ ಚರ್ಚೆಯ ಅಗತ್ಯವಿದೆ ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು.
ಎನ್ಆರ್ಸಿ ಲೋಪ ಸರಿಪಡಿಸಿ: ಈ ನಡುವೆ, ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ಆರ್ಸಿ) ಪಟ್ಟಿಯಲ್ಲಿ ಕೆಲವು ಲೋಪಗಳಿದ್ದು, ಅವುಗಳನ್ನು ಸರಿಪಡಿಸಿಯೇ ಸರ್ಕಾರ ಮುಂದಿನ ಹೆಜ್ಜೆಯಿಡಬೇಕು ಎಂದೂ ಆರೆಸ್ಸೆಸ್ ಹೇಳಿದೆ.
ಅಭಿಯಾನಕ್ಕೆ ಸಿದ್ಧತೆ: ಪ್ಲಾಸ್ಟಿಕ್ ಬಳಕೆಗೆ ಕಡಿವಾಣ, ಜಲ ಸಂರಕ್ಷಣೆ, ಗಿಡ ನೆಡುವಿಕೆ ನಿಟ್ಟಿನಲ್ಲಿ ದೇಶಾದ್ಯಂತ ಜಾಗೃತಿ ಅಭಿಯಾನ ಕೈಗೊಳ್ಳುವುದಾಗಿ ಆರೆಸ್ಸೆಸ್ ಘೋಷಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ