ಹೊಸ ವರ್ಷಕ್ಕೆ ರಜನಿ ಪಕ್ಷ?
Team Udayavani, Dec 23, 2017, 7:39 AM IST
ಚೆನ್ನೈ: ತಮಿಳು ಸೂಪರ್ ಸ್ಟಾರ್ ಅವರ ರಾಜಕೀಯ ಪ್ರವೇಶ ಕುರಿತಂತೆ ಎದ್ದಿರುವ ಊಹಾಪೋಹಗಳಿಗೆ ಶೀಘ್ರವೇ ತೆರೆ ಬೀಳಲಿದೆ. ಇದೇ ಮಾಸಾಂತ್ಯಕ್ಕೆ ತಮ್ಮ ರಾಜಕೀಯ ಪ್ರವೇಶ ಕುರಿತಂತೆ ಖುದ್ದು ರಜನಿ ಕಾಂತ್ ಅವರೇ ಪ್ರಕಟನೆ ನೀಡಲಿದ್ದಾರೆಂದು ರಜನಿ ಆಪ್ತ ಸಲಹೆಗಾರ ಹಾಗೂ ಗಾಂಧಿಯ ಮಕ್ಕಳ ಇಳಕ್ಕಂ ಮಣಿಯನ್ ಪಕ್ಷದ ಸಂಸ್ಥಾಪಕರಾದ ತಮಿಳರುವಿ ಮಣಿಯನ್ ತಿಳಿಸಿರುವುದಾಗಿ “ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಶುಕ್ರವಾರ ಬೆಳಗ್ಗೆ ಪೋಯೆಸ್ ಗಾರ್ಡನ್ನಲ್ಲಿರುವ ರಜನಿಕಾಂತ್ ಮನೆಯಲ್ಲಿ ರಜನಿ ಹಾಗೂ ಮಣಿಯನ್ ಸುಮಾರು 90 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಸಭೆಯ ಅನಂತರ ಪ್ರತಿಕ್ರಿಯಿಸಿರುವ ಮಣಿಯನ್, “”ಇದೇ ತಿಂಗಳ 26ರಿಂದ 31ರವರೆಗೆ ತಮ್ಮ ಅಭಿಮಾನಿಗಳನ್ನು ರಜನಿ ಭೇಟಿ ಮಾಡಿ, ತಮ್ಮ ರಾಜಕೀಯ ಪ್ರವೇಶ ಕುರಿತಂತೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಈ ನಿಟ್ಟಿನಲ್ಲಿ ಇದು ಅವರ 2ನೇ ಭೇಟಿ. ಆ 6 ದಿನಗಳ ಭೇಟಿಯ ಅನಂತರ ಕೊನೆಯ ದಿನ (ಡಿ. 31) ರಜನಿಕಾಂತ್, ತಮ್ಮ ರಾಜಕೀಯ ಪ್ರವೇಶ ಕುರಿತಂತೆ ಸ್ಪಷ್ಟವಾದ ಚಿತ್ರಣ ನೀಡಲಿದ್ದಾರೆ” ಎಂದು ಹೇಳಿದ್ದಾರೆ.
ಸಿಬಿಐ ವಿಶೇಷ ಕೋರ್ಟ್ 2ಜಿ ಹಗರಣದ ಆರೋಪಗಳಿಂದ ಡಿಎಂಕೆ ನಾಯಕರಾದ ಎ.ರಾಜಾ ಹಾಗೂ ಕನ್ನಿಮೋಳಿ ಅವರನ್ನು ದೋಷಮುಕ್ತರನ್ನಾಗಿಸಿರುವ, ಆರ್.ಕೆ.ನಗರ ಕ್ಷೇತ್ರದ ಉಪಚುನಾವಣೆ ವಿಚಾರ ಚರ್ಚೆಯಾಗಿದೆ ಎಂದು ಹೇಳಲಾಗಿದೆ. ಆದರೆ ಮಣಿಯನ್ ಅದನ್ನು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ