ಔರಂಗಜೇಬ್ ಮುಂದೆ ಬಾಗುವವರ ಜತೆ ಮೈತ್ರಿ ಇಲ್ಲ: ಸಂಜಯ್ ರವೂತ್
Team Udayavani, Mar 20, 2022, 6:20 AM IST
ಮುಂಬೈ: ಔರಂಗಜೇಬ್ ಸಮಾಧಿಯ ಮುಂದೆ ತಲೆಬಾಗಿ ನಮಿಸುವವರ ಜೊತೆಗೆ ಮೈತ್ರಿ ಹೇಗೆ ಸಾಧ್ಯ? ಎಂದು ಶಿವಸೇನೆಯ ನಾಯಕ ಸಂಜಯ್ ರವೂತ್ ಪ್ರಶ್ನಿಸಿದ್ದಾರೆ.
ಇತ್ತೀಚೆಗೆ, ಶಿವಸೇನೆಯ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಇಂಗಿತವನ್ನು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ನಾಯಕ ಇಮ್ತಿಯಾಜ್ ಜಲೀಲ್ ವ್ಯಕ್ತಪಡಿಸಿದ್ದರು.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಂಜಯ್ ರವೂತ್, ನಾವು ಔರಂಗಜೇಬ್ ಸಮಾಧಿಯ ಮುಂದೆ ತಲೆಬಾಗುವವರ ಜೊತೆಗೆ ಮೈತ್ರಿ ಬೆಳೆಸುವುದಿಲ್ಲ. ಇಂಥ ಯೋಚನೆಯನ್ನೂ ಮಾಡುವುದಿಲ್ಲ. ನಾವು ಛತ್ರಪತಿ ಶಿವಾಜಿಯವರ ಆದರ್ಶಗಳಲ್ಲೇ ಮುಂದುವರಿಯುತ್ತೇವೆ ಎಂದು ಹೇಳಿದ್ದಾರೆ.
“ಇದಲ್ಲದೆ, ಈಗಾಗಲೇ ಶಿವಸೇನೆಯು ಕಾಂಗ್ರೆಸ್, ಎನ್ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರವನ್ನು ರಚಿಸಿದೆ. ಈ ಮೈತ್ರಿಕೂಟದಲ್ಲಿ ನಾಲ್ಕನೇ ಪಕ್ಷವೊಂದನ್ನು ತರುವ ಯಾವುದೇ ಇಚ್ಛೆಯಿಲ್ಲ” ಎಂದು ಸಂಜಯ್ ರವೂತ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ