ಆಸಾರಾಂ ಗೆ ಜೀವಾವಧಿ ಶಿಕ್ಷೆ: ನಮಗೆ ನ್ಯಾಯ ಸಿಕ್ಕಿದೆ: ಬಾಲಕಿಯ ತಂದೆ


Team Udayavani, Apr 25, 2018, 12:24 PM IST

Asaram-700.jpg

ಜೋಧ್‌ಪುರ : “ಆಸಾರಾಂ ಬಾಪು ರೇಪ್‌ ಅಪರಾಧಿ ಎಂದು ಕೋರ್ಟ್‌ ಘೋಷಿಸಿ ಆತನಿಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆಯನ್ನು ಪ್ರಕಟಿಸಿದೆ.  ಅಂತೆಯೇ ನಮಗೆ ನ್ಯಾಯ ಸಿಕ್ಕಿದೆ. ಈ ಹೋರಾಟದಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಬಯಸುತ್ತೇನೆ. ಆಸಾರಾಂ ಗೆ ಈಗಿನ್ನು ಕಠಿನ ಶಿಕ್ಷೆ ಆಗುವುದೆಂದು ನಾನು ಹಾರೈಸುತ್ತೇನೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಮತ್ತು ಅಪಹರಣಕ್ಕೆ ಗುರಿಯಾದ ಸಾಕ್ಷಿದಾರರಿಗೆ ಕೂಡ ನ್ಯಾಯ ಸಿಗುವುದೆಂದು ನಾನು ಹಾರೈಸುತ್ತೇನೆ” ಎಂದು ರೇಪ್‌ ಸಂತ್ರಸ್ತೆಯ ತಂದೆ ಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತಾ ಹೇಳಿದ್ದಾರೆ. 

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣದಲ್ಲಿ ಆಸಾರಾಂ ಅಪರಾಧಿ ಎಂದು ಕೋರ್ಟ್‌ ಘೋಷಿಸುವ ಮೂಲಕ ಆತನಿಗೆ ಜೀವಾವಧಿ ಕಾರಾಗೃಹ ವಾಸದ ಶಿಕ್ಷೆಯನ್ನು ಪ್ರಕಟಿಸಿದೆ. ಕೊನೆಗೂ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದವರು ತೃಪ್ತಿಯಿಂದ ಹೇಳಿದ್ದಾರೆ.

2013ರಲ್ಲಿ ಆಸಾರಾಂ ಮಧ್ಯಪ್ರದೇಶದ ಛಿಂದ್‌ವಾರಾದಲ್ಲಿನ ತನ್ನ ಆಶ್ರಮದಲ್ಲಿ ಬಾಲಕಿಯನ್ನು ರೇಪ್‌ ಮಾಡಿದ್ದ. ರೇಪ್‌ ಗೆ ಒಳಗಾಗಿದ್ದ ಉತ್ತರ ಪ್ರದೇಶದ ಶಹಜಹಾನ್‌ಪುರದ ಹದಿಹರೆಯದ ಬಾಲಕಿಯು ಪೊಲೀಸರಲ್ಲಿ ದೂರು ದಾಖಲಿಸಿದ್ದಳು. ಸ್ವಯಂ ಘೋಷಿತ ದೇವಮಾನವ ಆಸಾರಾಂ ತನ್ನ ವಿರುದ್ಧದ ಈ ಆರೋಪವನ್ನು ಅಲ್ಲಗಳೆದಿದ್ದ. 

2013ರ ನವೆಂಬರ್‌ 6ರಂದು ಪೊಲೀಸರು ಆಸಾರಾಂ ಮತ್ತು ಆತನ ನಾಲ್ವರು ಸಹವರ್ತಿಗಳಾದ ಶಿವ, ಶಿಲ್ಪಿ, ಶರದ್‌ ಮತ್ತು ಪ್ರಕಾಶ್‌ ಎಂಬವರನ್ನು ಸಹ-ಆರೋಪಿಗಳನ್ನಾಗಿ ಹೆಸರಿಸಿ ಕೋರ್ಟಿಗೆ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು.  

ಇಂದು ನ್ಯಾಯಾಲಯವು ಆಸಾರಾಂ ಜತೆಗೆ ಶರದ್‌ ಮತ್ತು ಶಿಲ್ಪಿಯನ್ನು ಅಪರಾಧಿ ಎಂದು ಘೋಷಿಸಿದೆ. ಶಿವ ಮತ್ತು ಪ್ರಕಾಶ್‌ ರನ್ನು ಖುಲಾಸೆಗೊಳಿಸಿದೆ. 

77ರ ಹರೆಯದ ಆಸಾರಾಂ, 1970ರ ದಶಕದಲ್ಲಿ ಸಾಬರಮತಿ ನದೀ ತೀರದಲ್ಲಿ ಒಂದು ಸಣ್ಣ ಗುಡಿಸಲಿನ ರೂಪದ ಆಶ್ರಮವನ್ನು ಆರಂಭಿಸಿದ ಬಳಿಕ ಕಳೆದ ನಾಲ್ಕು ದಶಕಗಳಲ್ಲಿ ದೇಶ ವಿದೇಶಗಳಲ್ಲಿ ಒಟ್ಟು 400ಕ್ಕೂ ಅಧಿಕ ಐಶಾರಾಮಿ ಆಶ್ರಮಗಳನ್ನು  ಸ್ಥಾಪಿಸಿದ್ದು 10,000 ಕೋಟಿ ರೂ. ಮೌಲ್ಯದ ಸಾಮಾಜ್ಯವನ್ನು ಸ್ಥಾಪಿಸಿಕೊಂಡಿದ್ದ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.