ಲಖೀಂಪುರಖೇರಿ ಹಿಂಸಾಚಾರ: 15ರ ವರೆಗೆ ಆಶಿಶ್ ಪೊಲೀಸ್ ವಶಕ್ಕೆ
Team Udayavani, Oct 12, 2021, 5:53 AM IST
ಲಕ್ನೋ/ಲಖೀಂಪುರಖೇರಿ: ಲಖೀಂಪುರಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕೇಂದ್ರ ಸಚಿವ ಅಜಯ ಕುಮಾರ್ ಮಿಶ್ರಾ ಪುತ್ರ ಅಶಿಶ್ ಮಿಶ್ರಾ ಅವರನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಸ್ಥಳೀಯ ಕೋರ್ಟ್ ಸೋಮವಾರ ಆದೇಶ ನೀಡಿದೆ. ಹೀಗಾಗಿ ಅ.15 ರಂದು ಪೊಲೀಸ್ ವಶದ ಅವಧಿ ಮುಕ್ತಾಯವಾಗಲಿದೆ.
ಶನಿವಾರ ರಾತ್ರಿ ಆಶಿಶ್ರನ್ನು ಬಂಧಿಸಲಾಗಿತ್ತು ಅವರನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯನ್ನು ಅ.12ರಿಂದ ಅ.15ರವರೆಗೆ ಪೊಲೀಸ್ ವಶಕ್ಕೆ ನೀಡಿದೆ. ಈ ಸಮಯದಲ್ಲಿ ಅವರಿಗೆ ಯಾವುದೇ ರೀತಿಯಲ್ಲಿ ಹಿಂಸೆ ಮಾಡುವಂತಿಲ್ಲ ಹಾಗೂ ಅವರ ಪರ ವಕೀಲರ ಸಮ್ಮುಖದಲ್ಲೇ ವಿಚಾರಣೆ ನಡೆಸಬೇಕೆಂಬ ಷರತ್ತನ್ನು ನ್ಯಾಯಾಲಯ ಹಾಕಿದೆ.
ಮೌನ ಪ್ರತಿಭಟನೆ: ಅ.3ರ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟದಿಂದ ಅಜಯ ಕುಮಾರ್ ಮಿಶ್ರಾರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಕ್ನೋದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಅದಕ್ಕೆ ಪೂರಕವಾಗಿ ದೇಶಾದ್ಯಂತ ಕಾಂಗ್ರೆಸ್ ಮುಖಂಡರು, ಕಾರ್ಯ ಕರ್ತರು “ಮೌನ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ:ತಂಬಾಕು ಜಾಹೀರಾತಿಂದ ಬಿಗ್ ಬಿ ಹೊರಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ