
ಬಿಗ್ ಬಾಸ್: ಸಲ್ಮಾನ್ ಖಾನ್ ಗಿಂತ ಜಾಸ್ತಿ ಹಣ ಕೊಟ್ಟರೆ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗುತ್ತೇನೆ: ಅಶ್ನೀರ್ ಗ್ರೋವರ್
ಜೀವನದಲ್ಲಿ ಫಲಗೊಂಡಿರುವವರು ಮಾತ್ರ ಬಿಗ್ ಬಾಸ್ ಗೆ ಹೋಗುತ್ತಾರೆ.
Team Udayavani, Dec 3, 2022, 1:53 PM IST

ಮುಂಬಯಿ: ಶಾರ್ಕ್ ಟ್ಯಾಂಕ್ ಇಂಡಿಯಾ ಶೋ ಮೂಲಕ ಜನಪ್ರಿಯರಾದ ಭಾರತ್ ಪೇ ಸಂಸ್ಥಾಪಕ ಅಶ್ನೀರ್ ಗ್ರೋವರ್ ಹಿಂದಿಯ ಬಿಗ್ ಬಾಸ್ ಕಾರ್ಯಕ್ರಮದ ಬಗ್ಗೆ ಮಾತನಾಡಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ಉದ್ಯಮಿಯಾಗಿರುವ ಅಶ್ನೀರ್ ಗ್ರೋವರ್ ಹಿಂದಿಯ ಜನಪ್ರಿಯ ಶೋ ʼಶಾರ್ಜ್ ಟ್ಯಾಂಕ್ ಇಂಡಿಯಾʼ ದಲ್ಲಿ ತೀರ್ಪುಗಾರರಾಗಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ತನ್ನ ಆ್ಯಟಿಟ್ಯೂಡ್ ನಿಂದಲೇ ಜನರನ್ನು ಸೆಳೆದ ಅಶ್ನೀರ್ ಗ್ರೋವರ್ ಕೋಟ್ಯಂತರ ವ್ಯವಹಾರವನ್ನು ಮಾಡುವ ಯಶಸ್ವಿ ಉದ್ಯಮಿಯೂ ಹೌದು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಬಿಗ್ ಬಾಸ್ ಕಾರ್ಯಕ್ರಮದ ಬಗ್ಗೆ ಮಾತಾನಾಡಿದ್ದು ಈಗ ಸುದ್ದಿಯಾಗುತ್ತಿದೆ.
ಇದನ್ನೂ ಓದಿ: ಧೋನಿ ಬಳಿಕ ಸಿಎಸ್ ಕೆಗೆ ಯಾರು ನಾಯಕ?: ಗುಟ್ಟು ಬಿಚ್ಚಿಟ್ಟ ಕೋಚ್ ಮೈಕ್ ಹಸ್ಸಿ
“ನನಗೆ ಬಿಗ್ ಬಾಸ್ ಆಯೋಜಕರು, ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಲು ಕೇಳಿದ್ದರು. ಆದರೆ ನಾನು ಅವರ ಆಫರನ್ನು ತಿರಸ್ಕರಿಸಿದೆ. ನನ್ನ ಪ್ರಕಾರ ಜೀವನದಲ್ಲಿ ವೈಫಲ್ಯವನ್ನು ಅನುಭವಿಸಿದವರು ಮಾತ್ರ ಬಿಗ್ ಬಾಸ್ ನಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಮೊದಲಿಗೆ ನಾನು ಕಾರ್ಯಕ್ರಮವನ್ನು ನೋಡುತ್ತಿದ್ದೆ ಆದರೆ ಈಗ ಅದು ಹಳಸಿದ ಹಾಗೆ ಕಾಣುತ್ತದೆ” ಎಂದಿದ್ದಾರೆ.
ವಿಫಲಗೊಂಡಿರುವವರು ಮಾತ್ರ ಬಿಗ್ ಬಾಸ್ ಗೆ ಹೋಗುತ್ತಾರೆ. ಯಶಸ್ವಿ ವ್ಯಕ್ತಿಗಳಲ್ಲ. ನಾನು ಯಾವತ್ತೂ ಆ ಶೋಗೆ ಹೋಗಲ್ಲ. ನೀವು ಎಷ್ಟು ಹಣಕೊಟ್ಟರು ನಾನು ಅಲ್ಲಿಗೆ ಹೋಗಲ್ಲ. ಒಂದು ವೇಳೆ ಸಲ್ಮಾನ್ ಖಾನ್ ಗೆ ಕೊಟ್ಟ ಹಣದ್ದಷ್ಟು ನನಗೆ ಕೊಟ್ಟರೆ ಆಮೇಲೆ ನೋಡೋಣ ಎಂದು ಅವರು ಹೇಳಿದ್ದಾರೆ.
ಶಾರ್ಕ್ ಟ್ಯಾಂಗ್ ಸೀಸನ್ -2 ಶೀಘ್ರದಲ್ಲಿ ಬರಲಿದೆ. ಈ ಕಾರ್ಯಕ್ರಮದಲ್ಲಿ ಅಮಾನ್ ಗುಪ್ತ, ಅನುಪಮ್ ಮಿತ್ತಲು, ವಿನಿತಾ ಸಿಂಗ್, ನಮಿತಾ ತಾಪರ್,ಪಿಯೂಷ್ ಬನ್ಸಲ್ ಹಾಗೂ ಕಾರ್ ದೇಕೋ ಸಿಎಓ ಅಮಿತ್ ಜೈನ್ ಜಡ್ಜ್ ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅಶ್ನೀರ್ ಗ್ರೋವರ್ ಈ ಸಲಿ ಕಾರ್ಯಕ್ರಮದ ಭಾಗವಾಗಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?

Union Budget 2023: ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆ; 7 ಲಕ್ಷದವರೆಗೆ ಟ್ಯಾಕ್ಸ್ ಕಟ್ಟಬೇಕಿಲ್ಲ

ಮದ್ಯದಂಗಡಿಗಳನ್ನು ಗೋಶಾಲೆಗಳಾಗಿ ಪರಿವರ್ತಿಸಿ: ಬಿಜೆಪಿ ನಾಯಕಿ ಉಮಾ ಭಾರತಿ

ತಮಿಳುನಾಡು: ನಡು ರಸ್ತೆಯಲ್ಲೇ ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡನ ಥಳಿಸಿ ಹತ್ಯೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ