ಫೈರಿಂಗ್ನಲ್ಲಿ ಎಎಸ್ಐ ಸಾವು
Team Udayavani, May 3, 2019, 6:23 AM IST
ಪಶ್ಚಿಮ ಬಂಗಾಲದ ಹೌರಾ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದ ಅಸ್ಸಾಂ ರೈಫಲ್ಸ್ನ ಯೋಧ ಗುಂಡು ಹಾರಿಸಿದ ಪರಿಣಾಮ ಒಬ್ಬ ಸಹಾಯಕ ಸಬ್ ಇನ್ಸ್ಪೆಕ್ಟರ್ ಅಸುನೀಗಿ, ಇಬ್ಬರು ಗಾಯಗೊಂಡಿದ್ದಾರೆ.
ಬಗ್ನಾನ್ ಎಂಬಲ್ಲಿ ಲಕ್ಷ್ಮೀಕಾಂತ್ ಬರ್ಮನ್ ಎಂಬಾತ 13 ಸುತ್ತು ಗುಂಡು ಹಾರಿಸಿದ್ದಾನೆ. ಅಸುನೀಗಿದ ಅಧಿಕಾರಿಯನ್ನು ಭೋಲಾನಾಥ್ ದಾಸ್ ಮತ್ತು ಗಾಯಗೊಂಡವರನ್ನು ಅನಿಲ್ ರಾಜ್ಬಾನ್ ಶಾಹಿ, ರಂತು ಮನಿ ಎಂಬವರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಹಾರಿಸಿದಾತನನ್ನು ವಶಕ್ಕೆ ಪಡೆಯಲಾಗಿದೆ. ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದ. ಹೀಗಾಗಿ ಆತನನ್ನು ಚುನಾವಣೆ ಕರ್ತವ್ಯದಿಂದ ಹೊರಗಿಡಲಾಗಿತ್ತು. ಇದರ ಹೊರತಾಗಿಯೂ ಲಕ್ಷ್ಮೀಕಾಂತ್ ಬರ್ಮನ್ ಎಂಬಾತ ಗನ್ ಸೆಳೆದು ಗುಂಡು ಹಾರಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಿದ್ಧಿನಾಥ್ ಗುಪ್ತಾ ಹೇಳಿದ್ದಾರೆ. ಮೊದಲ ಹಂತದ ಮತದಾನದ ದಿನದಿಂದಲೂ ಪಶ್ಚಿಮ ಬಂಗಾಲದಲ್ಲಿ ಹಿಂಸಾಚಾರ ಸಂಭವಿಸುತ್ತಿದೆ. ಅದಕ್ಕೆ ಪೂರಕವಾಗಿ ಗುರುವಾರ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ