ಪೆಟ್ರೋಲ್, ಡೀಸೆಲ್ ಬೆಲೆ 5ರೂ. ಇಳಿಕೆ, ಶೇ.25ರಷ್ಟು ಅಬಕಾರಿ ಸುಂಕ ಕಡಿತ: ಅಸ್ಸಾಂ ಸರ್ಕಾರ
ಸೋನಾವಾಲ್ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಯಲ್ಲಿದೆ.
Team Udayavani, Feb 12, 2021, 1:21 PM IST
ಗುವಾಹಟಿ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 5 ರೂಪಾಯಿ ಕಡಿತಗೊಳಿಸಿರುವುದಾಗಿ ಅಸ್ಸಾಂ ಸರ್ಕಾರ ಶುಕ್ರವಾರ(ಫೆ.12, 2021) ಘೊಷಿಸಿದ್ದು, ಮದ್ಯದ ಮೇಲಿನ ಸುಂಕವನ್ನು ಶೇ.25ರಷ್ಟು ಇಳಿಕೆ ಮಾಡಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ: ಎಚ್.ವಿಶ್ವನಾಥ್ ವಾಗ್ದಾಳಿ
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನಂದಿತ ದಿನಕ್ಕೆ ಏರಿಕೆಯಾಗುತ್ತಿದೆ. ಈಗಾಗಲೇ ಮುಂಬೈ, ಬೆಂಗಳೂರು ಸೇರಿದಂತೆ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಲೀಟರ್ ಗೆ 90 ರೂಪಾಯಿ ದಾಟಿರುವುದಾಗಿ ವರದಿ ವಿವರಿಸಿದೆ.
ಪೆಟ್ರೋಲ್ ಡೀಸೆಲ್ ಬೆಲೆಯನ್ನು 5 ರೂಪಾಯಿ ಇಳಿಕೆ ಮಾಡಿರುವುದಾಗಿ ರಾಜ್ಯದ ವಿಧಾನಸಭೆಯಲ್ಲಿ ವಿತ್ತ ಸಚಿವ ಹಿಮಂತ್ ಬಿಸ್ವಾಸ್ ಘೋಷಿಸಿದ್ದಾರೆ.
ಸ್ಪೀಕರ್ ಸರ್, ಕೋವಿಡ್ 19 ಸೋಂಕು ಹೆಚ್ಚಳವಾದ ಸಂದರ್ಭದಲ್ಲಿ ನಾವು ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಮೇಲೆ ಹೆಚ್ಚುವರಿಯಾಗಿ ಸುಂಕ ವಿಧಿಸಿದ್ದೇವು. ಇದೀಗ ಕೋವಿಡ್ ಸೋಂಕಿತರ ಸಂಖ್ಯೆ ಇಳಿ ಮುಖವಾಗಿದೆ. ಆ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ವಿಧಿಸಿದ ಸುಂಕವನ್ನು ಇಳಿಕೆ ಮಾಡುವ ನನ್ನ ಪ್ರಸ್ತಾಪಕ್ಕೆ ಸಚಿವ ಸಂಪುಟದ ಸಹೋದ್ಯೋಗಿಗಳು ಬೆಂಬಲ ವ್ಯಕ್ತಪಡಿಸಿದ್ದರು.
ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ ಗೆ 5 ರೂಪಾಯಿ ಕಡಿಮೆಯಾಗಲಿದ್ದು, ಇಂದು ರಾತ್ರಿಯಿಂದಲೇ ಜಾರಿಯಾಗಲಿದ್ದು, ಇದರಿಂದ ಅಸ್ಸಾಂನ ಲಕ್ಷಾಂತರ ಗ್ರಾಹಕರಿಗೆ ಲಾಭವಾಗಲಿದೆ ಎಂದು ಹೇಳಿದರು.
ಮಾರ್ಚ್-ಏಪ್ರಿಲ್ ನಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಸರ್ಬಾನಂದಾ ಸೋನಾವಾಲ್ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ