ವೈದ್ಯನ ಯಡವಟ್ಟು: ಹೊಟ್ಟೆ ನೋವೆಂದು ಬಂದ ಗರ್ಭಿಣಿಗೆ 3 ತಿಂಗಳ ಮೊದಲೇ ಸಿಸೇರಿಯನ್!
ಮಗುವಿನ ಬೆಳವಣಿಗೆಯಾಗಿಲ್ಲವೆಂದು ಮತ್ತೆ ಹೊಲಿಗೆ ಹಾಕಿದ ಭೂಪ
Team Udayavani, Sep 3, 2022, 6:27 PM IST
ಅಸ್ಸಾಂ: ಗರ್ಭಿಣಿಯೋರ್ವಳು ಹೊಟ್ಟೆ ನೋವೆಂದು ಆಸ್ಪತ್ರೆ ಬಂದಿದ್ದ ವೇಳೆ, ಹೆರಿಗೆಗೆ ಮೂರು ತಿಂಗಳ ಅವಧಿ ಇರುವಾಗಲೇ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಗರ್ಭಿಣಿಯು ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದಿದ್ದರು, ಈ ವೇಳೆ ವೈದ್ಯನೊಬ್ಬ ಸಿಸೇರಿಯನ್ ನಡೆಸಿದ್ದಾನೆ. ಬಳಿಕ ಮಗುವಿನ ಬೆಳವಣಿಗೆಯಾಗಿಲ್ಲವೆಂದು ಮತ್ತೆ ಹೊಲಿಗೆ ಹಾಕಿ ಬೇಜಾವಾಬ್ದಾರಿ ತೋರಿ ಪ್ರಾಣದೊಂದಿಗೆ ಚೆಲ್ಲಾಟವಾಡಿದ್ದಾನೆ.
ಕರೀಂಗಂಜ್ ಸಿವಿಲ್ ಆಸ್ಪತ್ರೆಯ ವೈದ್ಯ ಡಾ. ಎ ಕೆ ಬಿಸ್ವಾಸ್ ಗೊತ್ತು ಗುರಿಯಿಲ್ಲದೇ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಗರ್ಭಿಣಿಯನ್ನು ಸುಮಾರು 11 ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ನಂತರ ಆಗಸ್ಟ್ 31 ರಂದು ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ:ಸೂಕ್ಷ್ಮ ವಿಚಾರ ಪಾಕ್ ಉಗ್ರರೊಂದಿಗೆ ಹಂಚಿಕೊಂಡ ಮೌಲ್ವಿಯ ಬಂಧನ
ಆಸ್ಪತ್ರೆ ಮುಂಭಾಗ ವೈದ್ಯರ ವಿರುದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಘಟನೆ ಕುರಿತು ವೈದ್ಯರು ಹಾಗೂ ಗರ್ಭಿಣಿಯ ಕುಟುಂಬದವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ