ಪ್ರವಾಹಕ್ಕೆ ಅಸ್ಸಾಂ ತತ್ತರ
Team Udayavani, Jul 14, 2019, 5:00 AM IST
ಹೊಸದಿಲ್ಲಿ: ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಸ್ಸಾಂ ತತ್ತರಿಸಿದ್ದು, 33 ಜಿಲ್ಲೆಗಳ ಪೈಕಿ 25 ಜಿಲ್ಲೆಗಳ ಜನ ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಶನಿವಾರ ಮಳೆ ಹಾಗೂ ಪ್ರವಾಹ ಸಂಬಂಧಿ ಘಟನೆಗಳಿಗೆ 7 ಮಂದಿ ಮೃತಪಟ್ಟಿದ್ದಾರೆ.
ಬ್ರಹ್ಮಪುತ್ರ ಸಹಿತ ಬಹುತೇಕ ಎಲ್ಲ ನದಿಗಳೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಪ್ರಸಕ್ತ ವರ್ಷದ ಎರಡನೇ ಸುತ್ತಿನ ಪ್ರವಾಹವು 1,556 ಗ್ರಾಮಗಳ 14 ಲಕ್ಷ ಮಂದಿಯ ಮೇಲೆ ಪರಿಣಾಮ ಬೀರಿದೆ. ಸುಮಾರು 7,600 ಮಂದಿಯನ್ನು ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲಾಗಿದ್ದು, 68 ತಾತ್ಕಾಲಿಕ ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ. ಪ್ರವಾಹದಿಂದಾಗಿ 27,864 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿವೆ.
ಬಿಹಾರ, ಈಶಾನ್ಯಕ್ಕೆ ಹೈಅಲರ್ಟ್: ಬಿಹಾರ, ಅಸ್ಸಾಂ, ಮೇಘಾಲಯ, ಸಿಕ್ಕಿಂ ಹಾಗೂ ಪಶ್ಚಿಮ ಬಂಗಾಲದ ಕೆಲವು ಭಾಗಗಳಲ್ಲಿ ರವಿವಾರ ಭಾರೀà ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹೈಅಲರ್ಟ್ ಘೋಷಿಸಿದೆ. ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು ಏಳಲಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೂ ಸೂಚನೆ ನೀಡಲಾಗಿದೆ.
ನೇಪಾಳ ಪ್ರವಾಹ: ಮೃತರ ಸಂಖ್ಯೆ 28ಕ್ಕೇರಿಕೆ: ಮುಂಗಾರು ಮಳೆಯಿಂದಾಗಿ ನೇಪಾಳದಲ್ಲಿ ಉಂಟಾಗಿರುವ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಶನಿವಾರ 28ಕ್ಕೇರಿದೆ. ಶುಕ್ರವಾರದಿಂದೀಚೆಗೆ ಭೂಕುಸಿದ ಮತ್ತು ಪ್ರವಾಹದಿಂದಾಗಿ 16 ಮಂದಿ ನಾಪತ್ತೆಯಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಎಲ್ಲ ಪ್ರಮುಖ ಹೆದ್ದಾರಿಗಳಲ್ಲಿ ಸಾರಿಗೆ ವ್ಯವಸ್ಥೆಗೂ ಅಡ್ಡಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ