200ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಅಸ್ಸಾಂನಲ್ಲಿ ತೀವ್ರಗೊಂಡ ಮಳೆ-ಪ್ರವಾಹ
ಪ್ರವಾಹಕ್ಕೆ 3 ಮಂದಿ ಬಲಿ
Team Udayavani, May 16, 2022, 7:38 PM IST
ನವದೆಹಲಿ: ಧಾರಾಕಾರ ಮಳೆ, ಪ್ರವಾಹ, ಭೂಕುಸಿತ, ಭೂಕಂಪ.ನಿರಂತರ ಪ್ರಾಕೃತಿಕ ವಿಕೋಪದಿಂದ ಅಸ್ಸಾಂ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಈಶಾನ್ಯ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದರ ನಡುವೆಯೇ 12 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದ್ದು, ಮಗು ಸೇರಿದಂತೆ 3 ಮಂದಿ ಮೃತಪಟ್ಟಿದ್ದಾರೆ. ಶನಿವಾರವಷ್ಟೇ ಪ್ರವಾಹಕ್ಕೆ 3 ಮಂದಿ ಬಲಿಯಾಗಿದ್ದರು.
ಇನ್ನೊಂದೆಡೆ, ಅಸ್ಸಾಂನಲ್ಲಿ ಮತ್ತು ಮೇಘಾಲಯದಲ್ಲಿ ಸೋಮವಾರ 24 ಗಂಟೆಗಳ ಅವಧಿಯಲ್ಲಿ 3.4 ತೀವ್ರತೆಯಲ್ಲಿ ಭೂಮಿಯು ಎರಡು ಬಾರಿ ಕಂಪಿಸಿದೆ. ಯಾವುದೇ ಸಾವು ನೋವು, ಆಸ್ತಿಪಾಸ್ತಿ ಹಾನಿ ವರದಿಯಾಗಿಲ್ಲ.
ಡಿಕೋಕ್ಚೆರ್ರಾ ರೈಲು ನಿಲ್ದಾಣದಲ್ಲಿ ಮಳೆ ಹಾಗೂ ಪ್ರವಾಹದಿಂದ ಹಳಿಗಳು ಮುಳುಗಡೆಯಾಗಿದ್ದು, ನೂರಾರು ಮಂದಿ ನಿಲ್ದಾಣದಲ್ಲೇ ಸಿಲುಕುವಂತಾಗಿದೆ. ಈ ಹಿನ್ನೆಲೆಯಲ್ಲಿ 119 ಪ್ರಯಾಣಿಕರನ್ನು ವಾಯುಪಡೆ ಹೆಲಿಕಾಪ್ಟರ್ಗಳ ಮೂಲಕ ಏರ್ಲಿಫ್ಟ್ ಮಾಡಲಾಗಿದೆ. ಪ್ರವಾಹದಿಂದಾಗಿ ರಸ್ತೆಗಳು, ಸೇತುವೆ, ನೀರಾವರಿ ಕಾಲುವೆಗಳು ಹಾನಿಗೀಡಾಗಿವೆ.
ಹಿಮಾಚಲದಲ್ಲೂ ಮಳೆ:
ಹಿಮಾಚಲ ಪ್ರದೇಶದಲ್ಲೂ ಮಳೆ ಅಬ್ಬರಿಸತೊಡಗಿದ್ದು, ಬುಧವಾರದವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರುಣಾಚಲ ಪ್ರದೇಶದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಹವಾಮಾನ ವೈಪರೀತ್ಯ: ಪರಿಸ್ಥಿತಿ ವಿಕೋಪಕ್ಕೆ
ಒಂದೇ ದೇಶ. ಆದರೆ, ಒಂದು ಕಡೆ ಮಳೆ-ಪ್ರವಾಹ, ಮತ್ತೊಂದು ಕಡೆ ಬಿಸಿಗಾಳಿ, ಮಗದೊಂದು ಕಡೆ ಭೂಕುಸಿತ. ಇದು ಭಾರತದಲ್ಲಿ ಹೆಚ್ಚುತ್ತಿರುವ ಹವಾಮಾನ ವೈಪರೀತ್ಯದ ಚಿತ್ರಣ.
ದೆಹಲಿಯಲ್ಲಿ ಬಿಸಿಲಿನ ಝಳವು 49 ಡಿ.ಸೆ. ದಾಟಿದ್ದರೆ, ದಕ್ಷಿಣದ ರಾಜ್ಯಗಳಲ್ಲಿ ಮಳೆ ತಾಂಡವವಾಡುತ್ತಿದೆ, ಈಶಾನ್ಯದಲ್ಲಿ ಪ್ರವಾಹ, ಭೂಕುಸಿತವು ಜನಜೀವನವನ್ನು ತತ್ತರಿಸಿದೆ. ಮುಂದಿನ ದಿನಗಳಲ್ಲಿ ಭಾರತವು ಇಂತಹ ಮತ್ತಷ್ಟು ವೈಪರೀತ್ಯಗಳಿಗೆ ಸಾಕ್ಷಿಯಾಗಲಿದೆ ಎಂದು ಪರಿಸರ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಅಸ್ಸಾಂ ಭೂಕುಸಿತದಿಂದ ಮೃತಪಟ್ಟವರು- 3
ಪ್ರವಾಹದಿಂದ ನಿರ್ವಸಿತರಾದವರು – 57,000
ಜಲಾವೃತಗೊಂಡ ಗ್ರಾಮಗಳು- 222
ಮುಳುಗಿದ ಕೃಷಿ ಭೂಮಿ- 10,321.44 ಹೆಕ್ಟೇರ್
ಹಾನಿಗೀಡಾದ ಮನೆಗಳು – 200
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ