ಅಸ್ಸಾಂನಲ್ಲಿ ಪ್ರವಾಹ: 62,000 ಮಂದಿ ಬಾಧಿತ; ಬ್ರಹ್ಮಪುತ್ರಾ ಅಪಾಯ ಮಟ್ಟದಲ್ಲಿ
Team Udayavani, Jul 10, 2019, 3:21 PM IST
ಗುವಾಹಟಿ : ಅಸ್ಸಾಂ ನಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು 62,000ಕ್ಕೂ ಅಧಿಕ ಜನರು ತೀವ್ರವಾಗಿ ಬಾಧಿತರಾಗಿದ್ದಾರೆ.
ಜೋರ್ಹಾಟ್ನ ನಿಮತಿ ಘಾಟ್ನಲ್ಲಿ ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.
ಅಸ್ಸಾಂ ವಿಕೋಪ ನಿರ್ವಹಣ ಪ್ರಾಧಿಕಾರದ ಪ್ರಕಾರ ಧೇಮಾಜಿ, ಲಖೀಮ್ಪುರ, ಬಿಶ್ವನಾಥ್, ಜೋರ್ಹಾಟ್ ಮತ್ತು ಗೋಲಘಾಟ್ ಜಿಲ್ಲೆಗಳು ನೆರೆಯಿಂದ ತೀವ್ರವಾಗಿ ಬಾಧಿತವಾಗಿವೆ.
ರಂಗನೋಡಿ ಹೈಡ್ರೋ ಇಲೆಕ್ಟ್ರಿಕ್ ಪ್ರಾಜೆಕ್ಟ್ ನಿಂದ ಹೆಚ್ಚುವರಿ ನೀರನ್ನು ಲಖೀಮ್ಪುರ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ; ಪರಿಣಾಮವಾಗಿ ಸ್ಥಳೀಯರು ಪ್ರವಾಹ ಪರಿಸ್ಥಿತಿಗೆ ಗುರಿಯಾಗಿದ್ದಾರೆ.
ಜಡಿಮಳೆಯ ಪರಿಣಾಮವಾಗಿ ಗುವಾಹಟಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮವಾಗಿ ಓರ್ವ ವ್ಯಕ್ತಿ ಮೃತಪಟ್ಟು ಇತರಿಬ್ಬರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್