ಅಸ್ಸಾಂ: ಭಾರೀ ಮಳೆ, ಪ್ರವಾಹಕ್ಕೆ 22 ಜಿಲ್ಲೆ ಸಂಪೂರ್ಣ ಜಲಾವೃತ, 34 ಮಂದಿ ಸಾವು
ರಾಜ್ಯದ 22 ಜಿಲ್ಲೆಗಳ ಸುಮಾರು 16,03,255 ಜನರು ಸಂಕಷ್ಟ ಅನುಭವಿಸುವಂತಾಗಿದೆ.
Team Udayavani, Jul 3, 2020, 9:33 AM IST
ದಿಸ್ಪುರ್(ಅಸ್ಸಾಂ):ಭಾರೀ ಮಳೆ, ಪ್ರವಾಹದಿಂದ ಅಸ್ಸಾಂನ 22 ಜಿಲ್ಲೆಗಳಿಗೆ ತೊಂದರೆಯಾಗಿದ್ದು, 16 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ತಿಳಿಸಿದೆ. ಮಳೆ, ಪ್ರವಾಹಕ್ಕೆ ಗುರುವಾರ ಒಬ್ಬರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ರಾಜ್ಯದ 22 ಜಿಲ್ಲೆಗಳ ಸುಮಾರು 16,03,255 ಜನರು ಸಂಕಷ್ಟ ಅನುಭವಿಸುವಂತಾಗಿದೆ. 12,597 ಜನರು 162 ನಿರಾಶ್ರಿತ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದರಲ್ಲಿ ದೇಮಾಜಿ, ಲಾಕೀಂಪುರ್, ಬಿಸ್ವನಾಥ್, ಡರ್ರಾಂಗ್, ನಾಲ್ಬಾರಿ, ಬಾರ್ಪೆಟಾ ಸೇರಿದಂತೆ ಇತರ ಜಿಲ್ಲೆಗಳು ಸೇರಿವೆ.
ನಮಗೀಗ ತುರ್ತು ಸರ್ಕಾರದ ನೆರವು ಬೇಕಾಗಿದೆ. ಈವರೆಗೂ ನಮ್ಮ ಪ್ರದೇಶಕ್ಕೆ ಸರ್ಕಾರದ ಒಬ್ಬರೇ, ಒಬ್ಬ ಅಧಿಕಾರಿ ಭೇಟಿ ಕೊಟ್ಟಿಲ್ಲ. ರಾಜ್ಯ ಸರ್ಕಾರ ನಮಗೆ ನೆರವು ನೀಡಬೇಕಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು