ಅಸ್ಸಾಂ ತೈಲ ಬಾವಿಗೆ ಬೆಂಕಿ ; ಎರಡು ಕಿಲೋ ಮೀಟರ್ ದೂರಕ್ಕೆ ಬೆಂಕಿ ಗೋಚರ
Team Udayavani, Jun 9, 2020, 5:06 PM IST
ಗೌಹಾತಿ: ಇಲ್ಲಿನ ತೀನ್ ಸುಖಿಯಾ ಜಿಲ್ಲೆಯಲ್ಲಿರುವ ತೈಲ ಬಾವಿಯೊಂದರಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಸುಮಾರು 14 ದಿನಗಳಿಂದ ಈ ತೈಲ ಬಾವಿಯಲ್ಲಿ ಅನಿಲ ಸೋರಿಕೆ ಉಂಟಾಗುತ್ತಿತ್ತು ಮತ್ತು ಇಂದು ಈ ಪ್ರದೇಶದಲ್ಲಿ ಭಾರೀ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿಕೊಂಡಿದೆ.
ಈ ಬೆಂಕಿಯ ತೀವ್ರತೆ ಸುಮಾರು ಎರಡು ಕಿಲೋಮೀಟರ್ ಗಳಷ್ಟು ದೂರಕ್ಕೆ ಕಾಣಿಸುವಷ್ಟು ತೀವ್ರ ಸ್ವರೂಪದ್ದಾಗಿದೆ ಎಂದು ಸ್ಥಳೀಯ ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
#WATCH Massive fire at the gas well of Oil India Ltd at Baghjan in Tinsukia district, Assam. A team of National Disaster Response Force (NDRF) is present at the spot pic.twitter.com/Tw2G92aPXy
— ANI (@ANI) June 9, 2020
ಆಯಿಲ್ ಇಂಡಿಯಾ ಲಿಮಿಟೆಡ್ ನ ತಜ್ಞರು ಹಾಗೂ ಎಂಜಿನಿಯರ್ ಗಳು ಕಳೆದ ಮೇ 27ರಿಂದ ಉಂಟಾಗುತ್ತಿದ್ದ ಅನಿಲ ಹಾಗೂ ತೈಲ ಸೋರಿಕೆ ಸಮಸ್ಯೆಯನ್ನು ಪರಿಶೀಲಿಸಿ ದುರಸ್ತಿಗೊಳಿಸುತ್ತಿದ್ದ ಸಂದರ್ಭದಲ್ಲೇ ಈ ದುರ್ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಘಟನಾ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ ಹಾಗೂ ತುರ್ತು ಪರಿಸ್ಥಿತಿ ನಿಭಾವಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಇದುವರೆಗೂ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ತೈಲ ಕಂಪೆನಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಆದರೆ ಇಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನೆಂದು ಮಾತ್ರ ಇನ್ನೂ ತಿಳಿದುಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸರಬಾನಂದ ಸೋನೋವಾಲ್ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ಸೋರಿಕೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಂಗಾಪುರದಿಂದ ಮೂವರು ತಜ್ಞರ ತಂಡವೂ ಸೋಮವಾರ ಈ ಪ್ರದೇಶಕ್ಕೆ ಆಗಮಿಸಿತ್ತು. ಮತ್ತು ಈ ತಂಡ ಆಯಿಲ್ ಇಂಡಿಯಾ ಹಾಗೂ ಒ.ಎನ್.ಜಿ.ಸಿ. ತಂಡದೊಂದಿಗೆ ಪರಿಸ್ಥಿತಿಯ ಕುರಿತು ಮಾಹಿತಿ ವಿನಿಮಯ ಮಾಡಿಕೊಂಡಿತ್ತು.
ಈ ಪ್ರದೇಶದಲ್ಲಿ ವಾಸವಾಗಿದ್ದ ಸುಮಾರು 1,610 ಕುಟುಂಬಗಳನ್ನು ಈಗಾಗಲೇ ಸಮೀಪದ ನಿರಾಶ್ರಿತ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿತ್ತು. ನೈಸರ್ಗಿಕ ಅನಿಲ ಹಾಗೂ ತೈಲ ಸೋರುವಿಕೆಯ ಕಾರಣದಿಂದ ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಮೀನುಗಳು, ನದಿ ಡಾಲ್ಫಿನ್ ಗಳು ಮತ್ತು ಹಕ್ಕಿಗಳು ಈಗಾಗಲೇ ಸಾವನ್ನಪ್ಪಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ