ಗೋವಾ: ಟಿಎಂಸಿಯ ಮೊದಲ ಚುನಾವಣೆ ಪ್ರಣಾಳಿಕೆ ಬಿಡುಗಡೆ
Team Udayavani, Dec 11, 2021, 5:21 PM IST
ಪಣಜಿ: ಹಣದುಬ್ಬರವನ್ನು ಎದುರಿಸಲು ಮಾಸಿಕ ಆರ್ಥಿಕ ಲಾಭವನ್ನು ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯ ರೂಪದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಗೋವಾದಲ್ಲಿ ತನ್ನ ಮೊದಲ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.
ಟಿಎಂಸಿ ಗೋವಾ ಉಸ್ತುವಾರಿ ಮಹುವಾ ಮೊಹಿತ್ರಾ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ- “ಗೃಹಲಕ್ಷ್ಮಿ” ಎಂಬ ಟಿಎಂಸಿ ಪಕ್ಷದ ಮೊದಲ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ರಾಜ್ಯದಲ್ಲಿ ಪ್ರತಿ ಗೃಹಿಣಿಯರಿಗೆ ಮಾಸಿಕವಾಗಿ 5,000 ರೂ ಭತ್ಯೆ ನೀಡಲಾಗುವುದು. 3.5 ಲಕ್ಷ ಗೃಹಿಣಿಯರು ಈ ಯೋಜನೆಯ ಅಡಿಯಲ್ಲಿ ಲಾಭ ಪಡೆಯಲಿದ್ದಾರೆ. ಬಿಜೆಪಿ ಸರ್ಕಾರದ ಗೃಹ ಆಧಾರ ಯೋಜನೆಯ ಅಡಿಯಲ್ಲಿ ಕಡ್ಡಾಯವಾಗಿರುವ ಗರಿಷ್ಠ ಆದಾಯದ ಮಿತಿಯನ್ನು ತೆಗೆದುಹಾಕಲಾಗುವುದು. ಬಿಜೆಪಿ ನೇತೃತ್ವದ ಸರ್ಕಾರವು ಗೃಹ ಆಧಾರ ಯೋಜನೆಯ ಅಡಿಯಲ್ಲಿ ಗೃಹಿಣಿಯರಿಗೆ ಸದ್ಯ 1,500 ರೂಗಳನ್ನು ನೀಡುತ್ತಿದೆ. ಆದಾಯದ ಮಿತಿಯಿಂದಾಗಿ ಈ ಯೋಜನೆಯು 1.5 ಲಕ್ಷ ಜನ ಮಹಿಳೆಯರಿಗೆ ಮಾತ್ರ ಲಭಿಸುತ್ತಿದೆ ಎಂದು ಮೊಹಿತ್ರಾ ನುಡಿದರು.
ಗೋವಾದಲ್ಲಿ ಗೃಹ ಆಧಾರ ಯೋಜನೆಗೆ ವಾರ್ಷಿಕವಾಗಿ 270 ಕೋಟಿ ರೂ ಬೇಕಾಗುತ್ತದೆ. ಆದರೆ ಬಿಜೆಪಿ ಸರ್ಕಾರವು ಕೇವಲ 140 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದರಿಂದಾಗಿ ಹೆಚ್ಚಿನ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಹುವಾ ಮೊಹಿತ್ರಾ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಟಿಎಂಸಿ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ