Bank Fraud Case: ಮಾಜಿ ಶಾಸಕರಿಗೆ ಸಂಬಂಧಿಸಿದ 152 ಕೋಟಿ ಮೌಲ್ಯದ ಆಸ್ತಿ ಜಪ್ತಿ
67 ಖಾತೆಗಳ ಮೂಲಕ ಬರೋಬ್ಬರಿ 560 ಕೋಟಿ ವಂಚನೆ
Team Udayavani, Oct 13, 2023, 10:39 AM IST
ಮಹಾರಾಷ್ಟ್ರ: ಪನ್ವೇಲ್ನ ಕರ್ನಾಲಾ ನಗರಿ ಸಹಕಾರಿ ಬ್ಯಾಂಕ್ ಲಿಮಿಟೆಡ್ಗೆ ಸಂಬಂಧಿಸಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಶಾಸಕ ವಿವೇಕಾನಂದ ಪಾಟೀಲ್ ಮತ್ತು ಅವರ ಸಂಬಂಧಿಕರಿಗೆ ಸೇರಿದ ಸುಮಾರು 152 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ವಿವೇಕಾನಂದ ಪಾಟೀಲ್ ‘ಶೆಟ್ಕರಿ ಕಾಮಗಾರಿ ಪಕ್ಷ’ ದ ನಾಯಕರಾಗಿದ್ದಾರೆ. ಈ ಹಿಂದೆ ಪನ್ವೇಲ್ನ ಕರ್ನಾಳ ನಗರಿ ಸಹಕಾರಿ ಬ್ಯಾಂಕ್ ಲಿಮಿಟೆಡ್ನ ಮಾಜಿ ಅಧ್ಯಕ್ಷರಾಗಿದ್ದರು. ಈ ಸಂದರ್ಭದಲ್ಲಿ ಪಾಟೀಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿತ್ತು.
2019 ರಲ್ಲಿ ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ತನಿಖೆಯನ್ನು ಕೈಗೆತ್ತಿಕೊಂದು ದಾಳಿ ನಡೆಸಿದೆ.
2019-20ರಲ್ಲಿ ರಿಸರ್ವ್ ಬ್ಯಾಂಕ್ನ ನಿದರ್ಶನದಲ್ಲಿ ಆಡಿಟ್ ಮಾಡಿದ ಬಳಿಕ ವಂಚನೆ ನಡೆದಿರುವುದು ಬೆಳಕಿಗೆ ಬಂದಿತು, ಪಾಟೀಲ್ ಅವರು 67 ಖಾತೆಗಳ ಮೂಲಕ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ. ಅಷ್ಟು ಮಾತ್ರವಲ್ಲದೆ ಈ 67 ಖಾತೆಗಳ ಮೂಲಕ ಬರೋಬ್ಬರಿ 560 ಕೋಟಿ ವಂಚನೆ ಮಾಡಿರೋದು ತಿಳಿದುಬಂದಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಪಾಟೀಲ್, ಅವರ ಕುಟುಂಬ ಸದಸ್ಯರು ಮತ್ತು ಅವರ ಸಂಬಂಧಿತರಿಂದ 234 ಕೋಟಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಲಾಗಿತ್ತು. ಇದರೊಂದಿಗೆ ಇದುವರೆಗೆ ಒಟ್ಟು 386 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ.
ಇದನ್ನೂ ಓದಿ: AAP: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಗರಂ ಆದ ಆಪ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು