ಆಟೋಮೊಬೈಲ್ ಕ್ಷೇತ್ರಕ್ಕೆ ನೆರವು
Team Udayavani, May 14, 2020, 7:13 AM IST
ಕೋವಿಡ್ 19 ವೈರಸ್ ಲಾಕ್ಡೌನ್ನಿಂದಾಗಿ ತಯಾರಿಕೆ ಮತ್ತು ಮಾರಾಟ ಎರಡಲ್ಲೂ ಸಾಕಷ್ಟು ನಷ್ಟ ಹೊಂದಿದ್ದ ಆಟೋಮೊಬೈಲ್ ಕ್ಷೇತ್ರಕ್ಕೆ ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಘೋಷಿಸಿರುವ ಘೋಷಣೆ, ನಿಯಮ ಗಳು ಆಟೋಮೊಬೈಲ್ ಕ್ಷೇತ್ರಕ್ಕೆ ಪರೋಕ್ಷವಾಗಿ ನೆರವಾಗುತ್ತದೆ ಎಂದು ವಾಹನಗಳ ಬಿಡಿಭಾಗ ಗಳ ತಯಾರಿಕಾ ಕಾರ್ಖಾನೆಗಳ ಸಂಘ (ಐಸಿ ಎಂಎ)ದ ಅಧ್ಯಕ್ಷ ದೀಪಕ್ ಜೈನ್ ತಿಳಿಸಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಗಳ (ಎಂಎಸ್ಎಂಇ) ವರ್ಗೀಕರಣಕ್ಕೆ ಈವರೆಗೆ ಅನುಸರಿಸುತ್ತಿದ್ದ ನಿಯಮಗಳು ಇನ್ನು ಬದಲಾಗುವುದರಿಂದ ಹಾಗೂ ಎಂಎಸ್ಎಂಇ ಬಗ್ಗೆ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ನಿಂದಾಗಿ ಆಟೋಮೊಬೈಲ್ ಕ್ಷೇತ್ರ ಬಲಗೊಳ್ಳುತ್ತ ದೆ ಎಂದು ಅವರು ಹೇಳಿದ್ದಾರೆ. “ಎಂಎಸ್ಎಂಇ ಸಂಸ್ಥೆಗಳ ಮೂಲಾರ್ಥವ ನ್ನು ಬದಲಾಯಿಸಬೇಕು. ಅವುಗಳ ಪುನರ್ ವಿಂಗಡಣೆಗೆ ಕ್ರಮ ಕೈಗೊಳ್ಳಬೇಕು ಎಂದು ಐಸಿಎಂಎ ಬಹುದಿನಗಳಿಂದ ಕೇಂದ್ರ ಸರ್ಕಾರವ ನ್ನು ಒತ್ತಾಯಿಸುತ್ತಿತ್ತು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ.
ಈಗ, ಇದಕ್ಕೆ ಕಾಲ ಕೂಡಿಬಂದಿದೆ’ ಎಂದಿರುವ ಅವರು, “ಹೊಸ ನಿಯಮಗಳನುಸಾರ, 1 ಕೋಟಿ ರೂ.ಗಿಂತ ಕಡಿಮೆ ಹೂಡಿಕೆ ಅಥವಾ 5 ಕೋಟಿ ರೂ.ಗಿಂತ ಕಡಿಮೆ ವಹಿವಾಟು ಹೊಂದಿರುವ ಸಂಸ್ಥೆಗಳನ್ನು ಸೂಕ್ಷ್ಮ ಉದ್ಯಮಗಳೆಂದೂ ಪರಿಗಣಿಸ ಲಾಗುತ್ತದೆ. 10 ಕೋಟಿ ರೂ.ಗಿಂತ ಕಡಿಮೆ ಹೂಡಿಕೆ ಅಥವಾ 50 ಕೋಟಿ ರೂ.ಗಿಂತ ಕಡಿಮೆ ವಹಿವಾಟು ಹೊಂದಿರುವವರನ್ನು ಸಣ್ಣ ಕೈಗಾರಿಕೆಗಳೆಂದೂ ಹಾಗೂ 20 ಕೋಟಿ ರೂ.ಗಿಂತ ಕಡಿಮೆ ಹೂಡಿಕೆ ಅಥವಾ 100 ಕೋಟಿ ರೂ.ಗಿಂತ ಕಡಿಮೆ ವಹಿವಾಟು ಹೊಂದಿರುವ ಕಂಪನಿಗಳನ್ನು ಮಧ್ಯಮ ಕೈಗಾರಿಕೆಗಳು ಎಂದು ಪರಿಗಣಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು