ಮಸ್ತಕಾಭಿಷೇಕಕ್ಕೆ ಇನ್ನೂಸಿಕ್ಕಿಲ್ಲ ಕೇಂದ್ರದ ನೆರವು
Team Udayavani, Dec 8, 2017, 12:40 PM IST
ನವದೆಹಲಿ: ವಿಶ್ವವಿಖ್ಯಾತ ಶ್ರವಣಬೆಳಗೊಳದ ಗೊಮ್ಮಟೇಶನಿಗೆ ಮುಂದಿನ ವರ್ಷ ಫೆ.7ರಿಂದ 26ರವರೆಗೆ ನಡೆಯಲಿರುವ ಮಹಾ ಮಸ್ತಾಕಾಭಿಷೇಕಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಆರ್ಥಿಕ ಸಹಾಯಕ್ಕಾಗಿ ಕರ್ನಾಟಕ ಸರ್ಕಾರ ಎದುರು ನೋಡುತ್ತಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ತಿಳಿಸಿದ್ದಾರೆ.
ಗುರುವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಪಶುಸಂಗೋಪನಾ
ಸಚಿವರೂ ಆದ ಮಂಜು, “”ಜೈನರ ಈ ಮಹಾ ಉತ್ಸವಕ್ಕಾಗಿ ಸಕಲ ಸಿದ್ಧತೆಗಳು ಶ್ರವಣಬೆಳಗೊಳದಲ್ಲಿ ಭರದಿಂದ ಸಾಗಿವೆ. ಈಗಾಗಲೇ ಶೇ. 75ರಷ್ಟು ತಯಾರಿ ಪೂರ್ಣಗೊಂಡಿವೆ. ರಾಜ್ಯ ಸರ್ಕಾರ, ಮಹಾ ಮಸ್ತಾಕಾಭಿಷೇಕಕ್ಕಾಗಿ 263 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರಲ್ಲಿ 88 ಕೋಟಿ ರೂ. ಗಳನ್ನು ಕ್ಷೇತ್ರಕ್ಕೆ ರಸ್ತೆ ಸಂಪರ್ಕ, ಇತರ ಮೂಲಸೌಕರ್ಯ ನೀಡಲು
ಬಳಸಲಾಗಿದೆ. ಈ ಮಹಾ ಹಬ್ಬಕ್ಕೆ ಇನ್ನೂ 500 ಕೋಟಿ ರೂ. ಹಣ ಬೇಕಿದ್ದು ಇದಕ್ಕಾಗಿ ಬಹು ಹಿಂದೆಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಇದಕ್ಕಿನ್ನೂ ಉತ್ತರ ಸಿಕ್ಕಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ