ವ್ಯಕ್ತಿ ಕೋಮಾದಲ್ಲಿ ಇದ್ದಾನೆ ಎಂದು 18 ತಿಂಗಳು ಮೃತದೇಹವನ್ನು ಮನೆಯಲ್ಲಿರಿಸಿದ್ದ ಕುಟುಂಬ
Team Udayavani, Sep 24, 2022, 9:15 AM IST
ಕಣ್ಣೂರು : ವ್ಯಕ್ತಿಯೊಬ್ಬ ಸತ್ತು ಹದಿನೆಂಟು ತಿಂಗಳು ಕಳೆದರೂ ಆತನ ಕುಟುಂಬ ಮಾತ್ರ ಆತ ಸಾವನ್ನಪ್ಪಲಿಲ್ಲ ಆತ ಕೋಮಾದಲ್ಲಿದ್ದಾನೆ ಎಂದು ಮೃತದೇಹವನ್ನು ಮನೆಯಲ್ಲಿ ಇರಿಸಿಕೊಂಡಿದ್ದ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.
ಆದಾಯ ತೆರಿಗೆ ಇಲಾಖೆ ನೌಕರ ವಿಮಲೇಶ್ ದೀಕ್ಷಿತ್ ಅವರು 2021 ರ ಏಪ್ರಿಲ್ 22 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದರು ಅಲ್ಲದೆ ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಆದರೆ ಮೃತರ ಕುಟುಂಬ ಮಾತ್ರ ಇದನ್ನು ಒಪ್ಪಲು ತಯಾರಿರಲಿಲ್ಲ ಅಲ್ಲದೆ ಮೃತ ವ್ಯಕ್ತಿಯ ಪತ್ನಿ ತನ್ನ ಗಂಡ ಸಾವನ್ನಪ್ಪಲಿಲ್ಲ ಬದಲಾಗಿ ಕೋಮಾದಲ್ಲಿ ಇದ್ದಾರೆ ಎಂದು ಭಾವಿಸಿ ಮನೆಗೆ ಕರೆತಂದು ಕಳೆದ ಹದಿನೆಂಟು ತಿಂಗಳಿನಿಂದ ಉಪಚರಿಸುತ್ತಿದ್ದಾರೆ.
ದಿನಾ ಬೆಳಿಗ್ಗೆ ಪತಿಯ ಕೊಳೆತ ಶವದ ಮೇಲೆ ಗಂಗಾ ಜಲ ಸಿಂಪಡಿಸಿ ಬೇಗ ಗುಣಮುಖರಾಗಲಿ ಎಂದು ಆರೈಕೆ ಮಾಡುತ್ತಿದ್ದಾರೆ.
ವಿಮಲೇಶ್ ದೀಕ್ಷಿತ್ ಅವರು ಕಳೆದ ವರ್ಷ ಏಪ್ರಿಲ್ನಲ್ಲಿ ನಿಧನರಾದರು ಆದರೆ ಅವರ ಕುಟುಂಬ ಸದಸ್ಯರು ಮಾತ್ರ ಆತ ಇನ್ನೂ ಬದುಕಿದ್ದಾನೆ ಎಂದು ಹೇಳಿ ವ್ಯಕ್ತಿಯ ಅಂತ್ಯಕ್ರಿಯೆಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ ಅಲೋಕ್ ರಂಜನ್ ಹೇಳಿದ್ದಾರೆ.
ಅಧಿಕಾರಿಗಳ ತಂಡವೊಂದು ಮೃತ ವ್ಯಕ್ತಿಯ ಕೆಲವು ದಾಖಲೆಗಳ ಪರಿಶೀಲನೆಗಾಗಿ ವ್ಯಕ್ತಿಯ ಮನೆಗೆ ಬಂದಾಗ ಅಧಿಕಾರಿಗಳಿಗೆ ಶಾಕ್ ಆಗಿತ್ತು… ವ್ಯಕ್ತಿ ಸತ್ತು ೧೮ ತಿಂಗಳು ಕಳೆದರೂ ಮೃತದೇಹವನ್ನು ಇನ್ನು ಮನೆಯಲ್ಲಿ ಇರಿಸಿಕೊಂದ್ದಾರಲ್ಲ ಎಂದು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಪೊಲೀಸರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆಗೆ ಆರೋಗ್ಯ ಅಧಿಕಾರಿಗಳ ತಂಡ ಮನೆಗೆ ಭೇಟಿ ನೀಡಿ ಸಾಕಷ್ಟು ಮನವೊಲಿಕೆಯ ನಂತರ, ಕುಟುಂಬ ಸದಸ್ಯರು ದೇಹವನ್ನು ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕೊಂಡೊಯ್ಯಲು ಆರೋಗ್ಯ ತಂಡಕ್ಕೆ ಅವಕಾಶ ಮಾಡಿಕೊಟ್ಟರು, ಬಳಿಕ ಮನೆ ಸದಸ್ಯರಿಗೆ ವ್ಯಕ್ತಿ ಸಾವನ್ನಪ್ಪಿರುವ ವಿಚಾರ ತಿಳಿಸಲಾಯಿತು.
ಇದನ್ನೂ ಓದಿ : ಯುವತಿಯ ಹತ್ಯೆ ಪ್ರಕರಣ : ಉತ್ತರಾಖಂಡ್ ಬಿಜೆಪಿ ನಾಯಕನ ಪುತ್ರ ಸೇರಿ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್