ಕೋವಿಡ್ 19: ರಾಜಕೀಯ ಭವಿಷ್ಯ ನುಡಿಯುತ್ತಿದ್ದ ಖ್ಯಾತ ಜ್ಯೋತಿಷಿ ಬೇಜಾನ್ ದಾರುವಾಲಾ ಇನ್ನಿಲ್ಲ
ಜ್ಯೋತಿಷಿ ಬೇಜಾನ್ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿತ್ತು.
Team Udayavani, May 29, 2020, 7:55 PM IST
ನವದೆಹಲಿ:ಕೋವಿಡ್ 19 ಮಹಾಮಾರಿಯ ಸೋಂಕಿನಿಂದ ಭಾರತದ ಪ್ರತಿಷ್ಠಿತ ಜ್ಯೋತಿಷಿ ಬೇಜಾನ್ ದಾರುವಾಲಾ (90ವರ್ಷ) ಅಹಮ್ಮದಾಬಾದ್ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ದಾರುವಾಲಾಗೆ ದೇಶಾದ್ಯಂತ ಲಕ್ಷಾಂತರ ಮಂದಿ ಅನುಯಾಯಿಗಳಿದ್ದರು ಎಂದು ವರದಿ ವಿವರಿಸಿದೆ.
ಕೆಲವು ದಿನಗಳ ಹಿಂದಷ್ಟೇ ಜ್ಯೋತಿಷಿ ಬೇಜಾನ್ ಅವರನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿತ್ತು. ಕಳೆದ ಕೆಲವು ದಿನಗಳಿಂದ ಅಹಮ್ಮದಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ವರದಿ ತಿಳಿಸಿದೆ.
ದಾರುವಾಲಾ ಗಣೇಶನ ಪರಮ ಭಕ್ತರಾಗಿದ್ದು, ದೇಶದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಗಣೇಶ ಸ್ಪೀಕ್ಸ್ ಎಂಬ ಹೆಸರಿನಲ್ಲಿ ಜ್ಯೋತಿಷ್ಯ ಅಂಕಣ ಬರೆಯುತ್ತಿದ್ದರು. ದಾರುವಾಲಾ ಅವರ ಭವಿಷ್ಯ ಜನರು ನಂಬುತ್ತಿದ್ದರು. ಅಲ್ಲದೇ ದೇಶಾದ್ಯಂತ ಅಪಾರ ಸಂಖ್ಯೆಯಲ್ಲಿ ದಾರುವಾಲಾ ಅವರ ಅನುಯಾಯಿಗಳಿದ್ದರು ಎಂದು ವರದಿ ಹೇಳಿದೆ.
ದೇಶದ ರಾಜಕೀಯ ಭವಿಷ್ಯವನ್ನು ನುಡಿಯುವಲ್ಲಿ ಸಿದ್ಧಹಸ್ತರಾಗಿದ್ದ ಬೇಜಾನ್ ದಾರುವಾಲಾ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ, ಮೊರಾರ್ಜಿ ದೇಸಾಯಿ ಅವರು ಪ್ರಧಾನಿಯಾಗಿ ಆಯ್ಕೆಯಾಗುವುದನ್ನು ಭವಿಷ್ಯ ನುಡಿದಿದ್ದರು. ಅಷ್ಟೇ ಅಲ್ಲ ಪ್ರಧಾನಿ ನರೇಂದ್ರ ಮೋದಿ ಬಗ್ಗೆಯೂ ದಾರುವಾಲಾ ಭವಿಷ್ಯ ನುಡಿದಿದ್ದರು. ರಾಜೀವ್ ಗಾಂಧಿ ಅವರ ಹತ್ಯೆ, ಸಂಜಯ್ ಗಾಂಧಿ ದುರಂತ, ಭೋಪಾಲ್ ಗ್ಯಾಸ್ ದುರಂತದ ಬಗ್ಗೆಯೂ ದಾರುವಾಲಾ ಭವಿಷ್ಯ ನುಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?