ಅಫ್ಘಾನ್ಗೆ ಜಗತ್ತಿನ ನೆರವು ಬೇಕು; ಜಿ-20 ರಾಷ್ಟ್ರಗಳಿಗೆ ಪಿಎಂ ಮೋದಿ ಸಲಹೆ
Team Udayavani, Oct 13, 2021, 6:21 AM IST
ಹೊಸದಿಲ್ಲಿ: “ಅಫ್ಘಾನಿಸ್ಥಾನವನ್ನು ಭಯೋತ್ಪಾದನೆಯ ಮೂಲ ಕೇಂದ್ರವನ್ನಾಗಿ ಪರಿವರ್ತನೆಯಾಗುವುದನ್ನು ತಡೆಯಿರಿ’- ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಅಫ್ಘಾನಿಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಜಿ-20 ರಾಷ್ಟ್ರಗಳ ಒಕ್ಕೂಟ ಆಯೋಜಿಸಿದ್ದ ವಚ್ಯುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಆ ದೇಶದಲ್ಲಿ ಮಾನವೀಯ ಮತ್ತು ಬದುಕಲು ಅಗತ್ಯವಾಗಿರುವ ಯೋಜನೆಗಳು ಅತ್ಯಂತ ತುರ್ತಾಗಿ ಬೇಕಾಗಿವೆ ಎಂದು ಹೇಳಿದ್ದಾರೆ.
ಆ ದೇಶದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಮುದಾಯ ಮುತುವರ್ಜಿ ವಹಿಸಿ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈಗಾಗಲೇ ಕೈಗೊಂಡ ನಿರ್ಣಯ ಅನುಷ್ಠಾನ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.
ಆ ದೇಶ ಮುಂದಿನ ದಿನಗಳಲ್ಲಿ ಉಗ್ರವಾದದತ್ತ ಪ್ರಚೋದನೆ, ಭಯೋತ್ಪಾದನೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಸಿಗುವ ಕೇಂದ್ರ ಆಗಬಾರದು. ಪ್ರಾದೇಶಿಕವಾಗಿ ಅಥವಾ ಜಗತ್ತನ್ನು ಕೇಂದ್ರೀಕರಿಸಿ ಉಗ್ರ ಚಟುವಟಿಕೆಗಳಿಗೆ ಅಲ್ಲಿ ಪ್ರೋತ್ಸಾಹ ಸಿಗಲೇಬಾರದು ಎಂದು ಪ್ರಧಾನಿ ಮೋದಿ ಜಿ-20 ರಾಷ್ಟ್ರಗಳಿಗೆ ಒತ್ತಾಯ ಮಾಡಿದರು ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಉಪಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಕಾರ್ಯಕರ್ತನಿಂದ ಬಿಜೆಪಿ ಯುವ ಕಾರ್ಯಕರ್ತರನ ಮೇಲೆ ಹಲ್ಲೆ
ತಡೆ ಅಗತ್ಯ: ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಮಾದಕ ವಸ್ತುಗಳ ಮತ್ತು ಅಕ್ರಮವಾಗಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ತಡೆಯೂ ಅಗತ್ಯವಾಗಿದೆ ಎಂದರು ಪ್ರಧಾನಿ ಮೋದಿ.
ಎಲ್ಲರನ್ನು ಒಳಗೊಂಡ ಸರಕಾರ: ಸದ್ಯ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಮಹಿಳೆಯರು, ಅಲ್ಪಸಂಖ್ಯಾಕರು ಸೇರಿದಂತೆ ಎಲ್ಲರನ್ನೂ ಒಳಗೊಂಡ ಸರಕಾರ ರಚನೆಯಾಗಬೇಕು. ಆಗ ಮಾತ್ರ ಅಲ್ಲಿ ಸುಸ್ಥಿರವಾಗಿರುವ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಉಪವಾಸದಿಂದ ಕಂಗೆಡುತ್ತಿರುವ ಅಫ್ಘಾನ್ನ ಪ್ರತಿಯೊಬ್ಬ ನಾಗರಿಕನಿಗಾಗಿ ಪ್ರತಿಯೊಬ್ಬ ಭಾರತೀಯ ಪ್ರಜೆಯ ಹೃದಯ ಮಿಡಿಯುತ್ತಿದೆ. ಹೀಗಾಗಿ, ಅ.30ರಂದು ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೈಗೊಂಡ ನಿರ್ಣಯ ಅನುಷ್ಠಾನವಾಗಬೇಕು ಎಂದಿದ್ದಾರೆ.
ಇಟಲಿ ಅಧ್ಯಕ್ಷತೆಯಲ್ಲಿ ಜಿ-20 ರಾಷ್ಟ್ರಗಳ ಒಕ್ಕೂಟ ಅಫ್ಘಾನಿಸ್ಥಾನದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಲು ಮುಂದಾಗಬೇಕು ಎಂದರು. ಭಾರತ ಮತ್ತು ಅಫ್ಘಾನಿಸ್ಥಾನದ ನಡುವೆ ಐತಿಹಾಸಿಕ ಕಾಲದಿಂದಲೂ ಅತ್ಯುತ್ತಮ ಬಾಂಧವ್ಯ ಇತ್ತು ಎಂಬ ಅಂಶವನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ