ಕೋವಿಡ್ ಸ್ವ ಪರೀಕ್ಷೆ ಮಾಡಿಕೊಳ್ಳುವ ಕಿಟ್ ಗಳು 3-4 ದಿನಗಳಲ್ಲಿ ಲಭ್ಯ.? : ಐಸಿಎಂಆರ್
Team Udayavani, May 20, 2021, 7:13 PM IST
ನವ ದೆಹಲಿ : ಮುಂದಿನ ಮೂರು ನಾಲ್ಕು ದಿನಗಳಲ್ಲಿ ಮನೆಯಲ್ಲಿಯೇ ಕೋವಿಡ್ 19 ಪರೀಕ್ಷೆ ಮಾಡುವ ಕಿಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿರಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಐಸಿಎಂಆರ್ ನ ನಿರ್ದೇಶಕ ಡಾ. ಬಲರಾಮ್ ಭಾರ್ಗವ್, ಕೋವಿಡ್ ಸ್ವ ಪರೀಕ್ಷೆಯ ಫಲಿತಾಂಶಗಳನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ತಲುಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಕೇರಳ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ
ಸ್ವ ಕೋವಿಡ್ ಪರೀಕ್ಷೆ ಮಾಡುವ ಹಂತಗಳ : ಹಂತ 1 ಎಂದರೆ ನೀವು ಪರೀಕ್ಷಾ ಕಿಟ್ ಅನ್ನು ಖರೀದಿಸಬೇಕು, ಹಂತ 2 – ಮೊಬೈಲ್ ಅಪ್ಲಿಕೇಶನ್ ಡೌನ್ ಲೋಡ್ ಮಾಡಿ. ಹಂತ 3- ಮನೆಯಲ್ಲಿ ಪರೀಕ್ಷೆಯನ್ನು ನಡೆಸಿ. ಹಂತ 4 – ಮೊಬೈಲ್ ಇಮೇಜ್ ಕ್ಲಿಕ್ ಮಾಡಿ ಮತ್ತು ಅಪ್ ಲೋಡ್ ಮಾಡಿ. ಪರೀಕ್ಷಾ ಫಲಿತಾಂಶವನ್ನು ನೀಡಲಾಗುವುದು “ಎಂದು ವಿವರಿಸಿದ್ದಾರೆ.
ಕೋವಿಡ್ ಸೋಂಕಿತರ ಗೌಪ್ಯತರಯನ್ನು ಕಾಪಾಡುವ ದೃಷ್ಟಿಯಿಂದ ಈ ಪ್ರಯತ್ನವನ್ನು ಮಾಡಲಾಗುತ್ತಿದೆ. ಡೇಟಾವನ್ನು ಸುರಕ್ಷಿತ ಸರ್ವರ್ ನಲ್ಲಿ ಸಂಗ್ರಹಿಸಲಾಗುತ್ತದೆ. ಇದು ಐಸಿಎಂಆರ್ ಡೇಟಾಬೇಸ್ ನೊಂದಿಗೆ ಸಂಪರ್ಕ ಹೊಂದಿದೆ. ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕೋವಿಡ್ ಸ್ವ ಪರಿಕ್ಷಾ ಕಿಟ್ ಗಳು ಲಭ್ಯವಿರಬೇಕು ಎಂದು ಅವರು ಹೇಳಿದ್ದಾರೆ.
ಇನ್ನು, ಪುಣೆಯ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಕೋವಿಡ್ ಸ್ವ ಪರೀಕ್ಷಾ ಕಿಟ್ ಗಳಿಗೆ ಇಂಡಿಯನ್ ಕೌನ್ಸಿಲ್ ನಿಂದ ಅನುಮೋದನೆಯನ್ನು ಪಡೆದುಕೊಂಡಿದೆ.
ಪುಣೆಯ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಕೋವಿಡ್ ಸ್ವ ಪರೀಕ್ಷಾ ಕಿಟ್ ಗಳನ್ನು ಇಂದು ಬಿಡುಗಡೆಗೊಳಿದೆ ಎಂದು ಕೂಡ ಅವರು ತಿಳಿಸಿದ್ದಾರೆ.
ಇನ್ನು, ದೇಶಾದ್ಯಂತ ಮೇ 18 ಮತ್ತು 19 ರಂದು 20 ಲಕ್ಷಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಇದರ ಹೊರತಾಗಿಯೂ, ಕೋವಿಡ್ ಹೊಸ ಪ್ರಕರಣಗಳ ಸಂಕ್ಯೆ ಗಣನೀಯವಾಗಿ ಇಳಿಕೆಯಾಗಿದ್ದು. ಕಳೆದ ಒಂದು ವಾರದಲ್ಲಿ ಕೋವಿಡ್ ಹೊಸ ಸೋಂಕಿನ ಪ್ರಮಾಣ ಶೇಕಡಾ 13 ಕ್ಕೆ ಇಳಿದಿದೆ. ಇನ್ನು,ಈ ತಿಂಗಳ ಅಂತ್ಯದ ವೇಳೆಗೆ ದಿನಕ್ಕೆ 25 ಲಕ್ಷ ಪರೀಕ್ಷೆಗಳು ಮತ್ತು ಜೂನ್ ಅಂತ್ಯದ ವೇಳೆಗೆ 45 ಲಕ್ಷ ಪರೀಕ್ಷೆಗಳನ್ನು ಮಾಡುವ ಗುರಿ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಸೋಂಕಿತ ಸೀನುವಾಗ ಹೊರಬರುವ ಏರೋಸಾಲ್ 10 ಮೀಟರ್ ದೂರ ಹೋಗಬಹುದು : ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು