ಕೋವಿಡ್ 19 ಆರ್ಥಿಕ ಸವಾಲಿಗೆ ಜಂಟಿ ಉತ್ತರ: ಮೋದಿ ಕರೆ

ಭಾರತ-ಇಯು ಒಗ್ಗಟ್ಟಿಗೆ ವರ್ಚುವಲ್‌ ಶೃಂಗಸಭೆಯಲ್ಲಿ ಮೋದಿ ಕರೆ

Team Udayavani, Jul 16, 2020, 6:52 AM IST

ಕೋವಿಡ್ 19 ಆರ್ಥಿಕ ಸವಾಲಿಗೆ ಜಂಟಿ ಉತ್ತರ: ಮೋದಿ ಕರೆ

ಭಾರತ ಮತ್ತು 27 ರಾಷ್ಟ್ರಗಳ ಐರೋಪ್ಯ ಒಕ್ಕೂಟಗಳ ವರ್ಚುವಲ್‌ ಶೃಂಗ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.

ಹೊಸದಿಲ್ಲಿ: ಭಾರತ ಮತ್ತು 27 ರಾಷ್ಟ್ರಗಳ ಐರೋಪ್ಯ ಒಕ್ಕೂಟಗಳ (ಇಯು) ನಡುವಿನ ಸಂಬಂಧವನ್ನು ಇನ್ನಷ್ಟು ವಿಸ್ತರಿಸಲು ಪ್ರಧಾನಿ ಮೋದಿ ಹೊಸ ಹೆಜ್ಜೆ ಇರಿಸಿದ್ದಾರೆ.

ಕೋವಿಡ್ 19 ಬಿಕ್ಕಟ್ಟಿನ ವೇಳೆ ಆರ್ಥಿಕತೆ ಸದೃಢಗೊಳಿಸಲು, ವಿಶ್ವಶಾಂತಿ ಮತ್ತು ಸ್ಥಿರತೆಗೆ ಭಾರತದೊಂದಿಗೆ ಪಾಲುದಾರರಾಗಲು ಇಯುವನ್ನು ಅವರು ಆಹ್ವಾನಿಸಿದ್ದಾರೆ.

ಭಾರತ-ಇಯು ವರ್ಚುವಲ್‌ ಶೃಂಗಸಭೆ ಉದ್ದೇಶಿಸಿ ಮೋದಿ ಬುಧವಾರ ಮಾತನಾಡಿದರು.

ಒಗ್ಗಟ್ಟಿನ ಹೋರಾಟ
ಇಂದು ಜನರ ಆರೋಗ್ಯ ಮತ್ತು ಸಮೃದ್ಧಿ ಎರಡೂ ನಾನಾ ಸಂಕಷ್ಟಗಳನ್ನು ಎದುರಿಸುತ್ತಿವೆ. ಕೋವಿಡ್ 19 ಅನಂತರ ನಮ್ಮ ಮುಂದೆ ಹಲವು ಸವಾಲುಗಳು ಹುಟ್ಟಿಕೊಂಡಿವೆ. ಇಂಥ ನಿರ್ಣಾಯಕ ಘಟ್ಟದಲ್ಲಿ ಮಾನವ ಕೇಂದ್ರಿತ ಆರ್ಥಿಕತೆಯ ಪುನರ್‌ ಸ್ಥಾಪನೆಗೆ ಭಾರತ ಮತ್ತು ಇಯು ಒಟ್ಟಾಗಿ ಹೋರಾಡಬೇಕು. ಮಾನವಕೇಂದ್ರಿತ ಜಾಗತೀಕರಣ ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಕರೆ ನೀಡಿದರು.

ನೈಸರ್ಗಿಕ ಸ್ನೇಹ
ಭಾರತ ಮತ್ತು ಇಯು ನೈಸರ್ಗಿಕ ಪಾಲುದಾರರು. ಪ್ರಜಾಪ್ರಭುತ್ವ, ಬಹುತ್ವ, ಸಹಭಾಗಿತ್ವ, ಜಾಗತಿಕ ಸಂಸ್ಥೆಗಳಿಗೆ ಗೌರವ, ಸ್ವಾತಂತ್ರ್ಯ ಮತ್ತು ಪಾರ ದರ್ಶಕತೆಯಂಥ ಜಾಗತಿಕ ಮೌಲ್ಯಗಳನ್ನು ನಾವು ಸಮಾನವಾಗಿ ಹಂಚಿಕೊಂಡಿದ್ದೇವೆ. ನಮ್ಮ ಪಾಲುದಾರಿಕೆ ವಿಶ್ವದ ಶಾಂತಿ, ಸ್ಥಿರತೆಗೂ ಪ್ರಯೋಜನ ಕಾರಿ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ಈ ವಾಸ್ತವ ಸ್ಪಷ್ಟವಾಗಿದೆ ಎಂದರು.

ವಿಶ್ವಕ್ಕೆ ಭಾರತ ಕೊಡುಗೆ
ಜಗತ್ತಿನ 150 ಕೋವಿಡ್ 19 ಸಂತ್ರಸ್ತ ರಾಷ್ಟ್ರಗಳಿಗೆ ಭಾರತ ಔಷಧಗಳನ್ನು ಕಳಿಸಿಕೊಟ್ಟಿದೆ. ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ಫಾರ್ಮಾ ಕಂಪೆನಿಗಳು ಪ್ರಮುಖ ಪಾತ್ರ ನಿರ್ವಹಿಸಲು ಸಿದ್ಧವಾಗಿವೆ.

ತಾಪಮಾನ ವೈಪರೀತ್ಯದಂಥ ದೀರ್ಘ‌ ಕಾಲೀನ ಸವಾಲುಗಳೂ ಇವೆ. ಭಾರತದಲ್ಲಿ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳಲ್ಲಿ ಐರೋಪ್ಯ ಹೂಡಿಕೆ ಮತ್ತು ತಂತ್ರಜ್ಞಾನಕ್ಕೆ ನಾವು ಸದಾ ಬಾಗಿಲು ತೆರೆದಿದ್ದೇವೆ ಎಂದರು.

ಒಪ್ಪಂದಕ್ಕೆ ಸಹಿ
ಭಾರತ ಮತ್ತು ಇಯು ನಾಗರಿಕ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕಿವೆ. ಮಂಗಳವಾರ ನಡೆದ ಈ ಒಪ್ಪಂದವು ವ್ಯಾಪಾರ, ಹೂಡಿಕೆ ಮತ್ತು ರಕ್ಷಣೆ ಸಹಿತ ಹಲವು ಕ್ಷೇತ್ರಗಳ ಸಂಬಂಧವನ್ನು ಇನ್ನಷ್ಟು ಗಾಢವಾಗಿಸುವ ಗುರಿ ಹೊಂದಿದೆ.

ಮೋದಿಯ 5 ಕರೆಗಳು

– ಕೋವಿಡ್ 19 ಸೃಷ್ಟಿಸಿರುವ ಸವಾಲುಗಳನ್ನು ಜತೆಗೂಡಿ ಎದುರಿಸೋಣ.

– ಮಾನವ ಕೇಂದ್ರಿತ ಆರ್ಥಿಕತೆಯನ್ನು ಪುನರ್‌ ನಿರ್ಮಿಸೋಣ.

– ವಿಶ್ವಶಾಂತಿ, ಸ್ಥಿರತೆ ಕಾಪಾಡುವುದು ನಮ್ಮ ಆದ್ಯತೆಯಾಗಲಿ.

– ಹವಾಮಾನ ವೈಪರೀತ್ಯಕ್ಕೂ ಜತೆಯಾಗಿ ಉತ್ತರಿಸೋಣ.

– ನವೀಕರಿಸುವ ಶಕ್ತಿ ಬಳಕೆ ಹೆಚ್ಚಿಸಲು ಕೈಜೋಡಿಸೋಣ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.