ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 10ಕ್ಕೂ ಹೆಚ್ಚು ಮಂದಿ ಸಾವಿನ ಶಂಕೆ
50 ಮಂದಿ ನಾಪತ್ತೆ; ರಕ್ಷಣಾ ತಂಡಗಳಿಂದ ಶೋಧ
Team Udayavani, Sep 4, 2019, 6:16 PM IST
ಗುರ್ದಾಸ್ಪುರ (ಪಂಜಾಬ್): ಇಲ್ಲಿನ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರೊಂದಿಗೆ ಸುಮಾರು 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಸ್ಫೋಟದ ತೀವ್ರತೆಗೆ ಕಟ್ಟಡವೇ ಕುಸಿದಿದ್ದು, ಅದರಡಿಯಲ್ಲಿ ಕಾರ್ಮಿಕರು ಇದ್ದಾರೆ ಎಂದು ಹೇಳಲಾಗಿದೆ. ಇದರೊಂದಿಗೆ ಅಕ್ಕಪಕ್ಕದ ಕಟ್ಟಡಗಳೂ ಕಂಪಿಸಿದ್ದು, ಕಿ.ಮೀ. ದೂರದವರೆಗೆ ಸ್ಫೋಟದ ಶಬ್ದ ಕೇಳಿದೆ. ಹಲವು ಕಾರುಗಳಿಗೆ ಹಾನಿಯಾಗಿವೆ.
ಸ್ಥಳಕ್ಕೆ ಕೂಡಲೇ ಪರಿಹಾರ ತಂಡಗಳು ಆಗಮಿಸಿವೆ. ಕಟ್ಟಡದ ಅಡಿಯಲ್ಲಿರುವವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹೇಳಿದ್ದಾರೆ. ಸ್ಥಳಕ್ಕೆ ಎನ್ಡಿಆರ್ಎಫ್ ನ ಸಿಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಗುರ್ದಾಸ್ಪುರದ ಸಂಸದ ಸನ್ನಿ ಡಿಯೋಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?