ಹಿ.ಪ್ರ : 200 ಅಡಿ ಆಳಕ್ಕೆ ಶಾಲಾ ಬಸ್ಸು ಬಿದ್ದು 26 ಮಕ್ಕಳ ಸಾವು
Team Udayavani, Apr 9, 2018, 7:31 PM IST
ಹೊಸದಿಲ್ಲಿ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ನೂರ್ಪುರ್ ಎಂಬಲ್ಲಿ ಇಂದು ಸೋಮವಾರ ಶಾಲಾ ಬಸ್ಸೊಂದು ಇನ್ನೂರು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಸಂಭವಿಸಿದ ಭೀಕರ ದುರಂತದಲ್ಲಿ 26 ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಮಾರು 25 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳೀಯರ ನೆರವಿನಲ್ಲಿ ರಕ್ಷಣಾ ಕಾರ್ಯ ಜಾರಿಯಲ್ಲಿದೆ. ರಾಷ್ಟ್ರೀಯ ದುರಂತ ಸ್ಪಂದನೆ ದಳವನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ಈ ದುರಂತದ ತನಿಖೆಗೆ ಉನ್ನತ ಮಟ್ಟದ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
ದುರಂತದಲ್ಲಿ ಹಲವಾರು ಮಕ್ಕಳು ಮೃತಪಟ್ಟು ಇನ್ನಷ್ಟು ಹಲವು ಮಕ್ಕಳು ಗಾಯಗೊಂಡಿರವುದಾಗಿ ನನಗೆ ತಿಳಿದು ಬಂದಿದೆ. ನಾನು ಮುಖ್ಯ ಕಾರ್ಯದರ್ಶಿ, ಡಿಜಿ ಮತ್ತು ಡೆಪ್ಯುಟಿ ಕಮಿಷನರ್ ಜತೆಗೆ ಮಾತನಾಡಿದ್ದೇನೆ; ರಕ್ಷಣಾ ಕಾರ್ಯ ನಡೆಯುತ್ತಿದೆ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇನೆ ಎಂದು ಸಿಎಂ ಠಾಕೂರ್ ಹೇಳಿದರು.
ಪ್ರಾಥಮಿಕ ತನಿಖೆಗಳ ಪ್ರಕಾರ ದುರಂತಕ್ಕೆ ಈಡಾದ ಬಸ್ಸು ಖಾಸಗಿ ಶಾಲೆಯೊಂದಕ್ಕೆ ಸೇರಿದೆ. ದಿನದ ಶಾಲಾ ವೇಳೆ ಮುಗಿದ ಬಳಿಕ ಮಕ್ಕಳನ್ನು ಅವರವರ ಮನೆಗೆ ಬಿಡುವುದಕ್ಕೆ ಬಸ್ಸು ಹೋಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು