ತಾರಾಪುರ ರಾಸಾಯನಿಕ ಘಟಕದಲ್ಲಿ ಅಗ್ನಿ ಅನಾಹುತ; 3 ಸಾವು
Team Udayavani, Mar 9, 2018, 3:39 PM IST
ಮುಂಬಯಿ : ಪಾಲಘರ್ ನ ತಾರಾಪುರದಲ್ಲಿ ನಿನ್ನೆ ಗುರುವಾರ ತಡ ರಾತ್ರಿ ಖಾಸಗಿ ರಾಸಾಯನಿಕ ಉತ್ಪಾದನಾ ಕಂಪೆನಿಯೊಂದರಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿ ಸಮೀಪದ ಕಟ್ಟಡಗಳಿಗೂ ಅದು ಪಸರಿಸಿದ ಭೀಕರ ದುರಂತದಲ್ಲಿ ಮೂವರು ಮೃತಪಟ್ಟು ಇತರ ಐವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ತುರ್ತು ಕರೆ ಬಂದೊಡನೆಯೇ ಅಗ್ನಿ ಅವಘಡ ತಾಣಕ್ಕೆ ಧಾವಿಸಿದ ಐದು ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡವು. ಇದೇ ವೇಳೆ ರಕ್ಷಣಾ ಕಾರ್ಯವನ್ನೂ ಕೈಗೊಳ್ಳಲಾಗಿ ಕಟ್ಟಡದ ಒಳಗೆ ಸಿಲುಕಿ ಕೊಂಡಿದ್ದವರನ್ನು ಪಾರುಗೊಳಿಸಲಾಯಿತು.
ರಾಸಾಯನಿಕ ಘಟಕದಲ್ಲಿ ರಾತ್ರಿ 11.15ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡು ಶರವೇಗದಲ್ಲಿ ಅದು ಇಡಿಯ ಕಟ್ಟಡವನ್ನು ಆವರಿಸಿತು. ಬಳಿಕ ಅಕ್ಕಪಕ್ಕದ ಕಟ್ಟಡಗಳಿಗೂ ಬೆಂಕಿ ಹರಡ ತೊಡಗಿತು.
ಬೆಂಕಿಗೆ ಕಾರಣವಾದ ಭಾರೀ ದೊಡ್ಡ ಸ್ಫೋಟದ ಸದ್ದು ಹತ್ತು ಕಿ.ಮೀ. ದೂರದ ವರೆಗೂ ಕೇಳಿ ಬಂದಿತ್ತು ಎಂದು ಪಾಲಘರ ನಿಯಂತ್ರಣ ಕೊಠಡಿಯ ಪೊಲೀಸ್ ಅಧಿಕಾರಿ ಪ್ರಮೋದ್ ಪವಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು