ಒಂದೇ ಟೇಬಲಿನಲ್ಲಿ ಕುಳಿತು ಊಟ ಸವಿದ ಅಮಿತ್ ಶಾ – ದೀದಿ!
ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮನೆಯಲ್ಲಿ ಶಾ – ದೀದಿ ಮುಖಾಮುಖಿ
Team Udayavani, Feb 29, 2020, 12:02 AM IST
ಭುವನೇಶ್ವರ: ಪಕ್ಷದ ಸಿದ್ಧಾಂತಗಳು ಮತ್ತು ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ ರಾಜಕಾರಣಿಗಳು ವೈಯಕ್ತಿಕ ಆತ್ಮೀಯತೆಯನ್ನು ಪ್ರದರ್ಶಿಸುತ್ತಲೇ ಬರುತ್ತಿದ್ದಾರೆ.
ಇದಕ್ಕೊಂದು ನಿದರ್ಶನವೆಂಬಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೆಂದ್ರ ಸರಕಾರದ ಕಟು ಟೀಕಾಕಾರ್ತಿಯಾಗಿರುವ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎದುರು ಬದುರು ಕುಳಿತು ಒಂದೇ ಟೇಬಲ್ಲಿನಲ್ಲಿ ಊಟ ಮಾಡಿದ್ದು ಭಾರೀ ಸುದ್ದಿಯಾಗಿದೆ.
Such a pleasure having the company of Union Home Minister @AmitShah ji, my colleague CMs, @MamataOfficial, @NitishKumar ji & Union Minister @dpradhanbjp ji at Naveen Niwas. Had a wonderfully interactive time over some home cooked #Odia delicacies. pic.twitter.com/tmhfsJnDq2
— Naveen Patnaik (@Naveen_Odisha) February 28, 2020
ಇದು ಸಾಕಾರಗೊಂಡಿರುವುದು ಒಡಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಮನೆಯಲ್ಲಿ. ಪಟ್ನಾಯಕ್ ಜೊತೆಯಲ್ಲಿ ಅಮಿತ್ ಶಾ, ಮಮತಾ ಬ್ಯಾನರ್ಜಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರುಗಳಿದ್ದರು.
ಈಸ್ಟರ್ನ್ ಝೋನಲ್ ಕೌನ್ಸಿಲ್ ನ 24ನೇ ಸಭೆಯಲ್ಲಿ ಭಾಗವಹಿಸಲೆಂದು ಈ ನಾಯಕರು ಒಡಿಸ್ಸಾಕ್ಕೆ ಆಗಮಿಸಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪ್ರತಿನಿಧಿಯಾಗಿ ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಸಚಿವ ರಾಮೇಶ್ವರ್ ಓರನ್ ಅವರು ಈ ಭೋಜನ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ