ವಾಜಪೇಯಿ ಸ್ಮೃತಿ ಸ್ಥಾಯಿ:  4 ಕಿ.ಮೀ. ಸಾಗಿದ ಯಾತ್ರೆ  


Team Udayavani, Aug 18, 2018, 6:00 AM IST

20.jpg

ಹೊಸದಿಲ್ಲಿ: ಕೋಟ್ಯಂತರ ಜನರ ಹೃದಯ ಸಾಮ್ರಾಟನಾಗಿ ಮೆರೆದ, ಅಪ್ರತಿಮ ನಾಯಕ ಅಟಲ್‌ ಬಿಹಾರಿ ವಾಜಪೇಯಿ ಅವರ ದೇಹ ಪಂಚಭೂತಗಳಲ್ಲಿ ಲೀನವಾದರೂ ಅವರು ದೇಶವಾಸಿಗಳ “ಸ್ಮತಿ’ಯಲ್ಲಿ ಸ್ಥಾಯಿಯಾಗಿ ಉಳಿದರು. ಅಗಲಿದ ನಾಯಕನ ಅಂತಿಮ ದರ್ಶನಕ್ಕಾಗಿ ದಿಲ್ಲಿಗೆ ದೌಡಾಯಿಸಿದ್ದ ಸಾವಿರಾರು ಮಂದಿಯ ಅಶ್ರು ತರ್ಪಣದೊಂದಿಗೆ ಮಾಜಿ ಪ್ರಧಾನಿಯ ಅಂತ್ಯಕ್ರಿಯೆ ಹೊಸದಿಲ್ಲಿಯ ಸ್ಮತಿ ಸ್ಥಳದಲ್ಲಿ ಶುಕ್ರವಾರ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸಾರ್ಥಕ ಬದುಕನ್ನು ಕಂಡ ಕವಿ ಹೃದಯಿಗೆ 21 ಕುಶಾಲು ತೋಪುಗಳನ್ನು ಗೌರವಾರ್ಥವಾಗಿ ಹಾರಿಸುವ ಮೂಲಕ ಅಂತಿಮ ವಿದಾಯ ಹೇಳಲಾಯಿತು.

ಮಹಾತ್ಮ ಗಾಂಧಿ, ಮಾಜಿ ಪ್ರಧಾನಿಗಳಾದ ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಸಮಾಧಿಯ ಪಕ್ಕದಲ್ಲೇ ಅಟಲ್‌ ಅವರ ಅಂತಿಮ ಸಂಸ್ಕಾರ ನಡೆಸಲಾಯಿತು. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌, ಗುಲಾಂ ನಬಿ ಆಜಾದ್‌, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಹಿತ ಹಲವಾರು ಗಣ್ಯರು ಹಾಜರಿದ್ದು ಅಂತಿಮ ಗೌರವ ಸಲ್ಲಿಸಿದರು.

ನಾಲ್ಕು ಕಿ.ಮೀ. ಸಾಗಿ ಬಂದ ಯಾತ್ರೆ
ದಿಲ್ಲಿಯ ದೀನ್‌ ದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಿಂದ ಅಟಲ್‌ ಪಾರ್ಥಿವ ಶರೀರವನ್ನು ಹೊತ್ತ ತೆರೆದ ವಾಹನದ ಜತೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅಂತ್ಯಕ್ರಿಯೆ ನಡೆದ ಸ್ಮತಿ ಸ್ಥಳದವರೆಗೆ 4 ಕಿ.ಮೀ. ದೂರ ನಡೆದುಕೊಂಡೇ ಬಂದರು. 

ಅಂತ್ಯಸಂಸ್ಕಾರಕ್ಕೆ ಬಂದ ಸಾರ್ಕ್‌ ನಾಯಕರು
“ನೀವು ಸ್ನೇಹಿತರನ್ನು ಬದಲಾಯಿ ಸಬಹುದು; ಆದರೆ ನೆರೆಹೊರೆಯ ವರನ್ನಲ್ಲ’ ಎಂದು 15 ವರ್ಷಗಳ ಹಿಂದೆ ವಾಜಪೇಯಿ ಹೇಳಿದ್ದರು. ಈ ಮಾತು ಬಹಳ ಜನಪ್ರಿಯ ಮತ್ತು ಮೆಚ್ಚುಗೆಯನ್ನೂ ಪಡೆದಿತ್ತು. ಆ ಮಾತನ್ನು ಮನ್ನಿಸಿಯೋ ಎಂಬಂತೆ ಪಾಕಿಸ್ಥಾನ ಸಹಿತ ಸಾರ್ಕ್‌ ರಾಷ್ಟ್ರಗಳ ನಾಯಕರು ಅಟಲ್‌ರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು. ಭೂತಾನ್‌ ರಾಜ ಜಿಗೆ ಖೇಸರ್‌ ನಾಮ್‌ಗೆàಲ್‌ ವಾಂಗ್‌ಚುಕ್‌, ಪಾಕಿಸ್ಥಾನದ ಕಾನೂನು ಸಚಿವ ಅಲಿ ಝಫ‌ರ್‌, ನೇಪಾಲದ ವಿದೇಶಾಂಗ ಸಚಿವ ಪ್ರದೀಪ್‌ ಕುಮಾರ್‌ ಗಯಾವಿ, ಶ್ರೀಲಂಕಾದ ವಿದೇಶಾಂಗ ಸಚಿವ ಲಕ್ಷ್ಮಣ ಕಿರಿಯೆಲ್ಲಾ ಭಾಗವಹಿಸಿದ್ದರು. ಅಫ್ಘಾನಿಸ್ಥಾನದ ಮಾಜಿ ಅಧ್ಯಕ್ಷ ಹಮೀದ್‌ ಕಜೈ ವಿಶೇಷವಾಗಿ ಭಾಗವಹಿಸಿದ್ದರು.

ಅಗ್ನಿಸ್ಪರ್ಶ ಮಾಡಿದ ದತ್ತುಪುತ್ರಿ ನಮಿತಾ
“ಅಟಲ್‌ ಬಿಹಾರಿ ವಾಜಪೇಯಿ ಅಮರ್‌ ರಹೇ’ ಎಂಬ ಅಭಿಮಾನಿಗಳ ಘೋಷಣೆ ನಡುವೆಯೇ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಅವರು ಸಂಜೆ 5 ಗಂಟೆಗೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಅಂತ್ಯಕ್ರಿಯೆಯನ್ನು ಪುತ್ರರೇ ಮಾಡಬೇಕೆಂಬ ನಿಯಮ ಇಲ್ಲ ಎಂಬ ಸಂದೇಶವನ್ನೂ ಸಾರಿದರು. ಜತೆಗೆ ಚಿತೆಯ ಹೊರ ಭಾಗದಲ್ಲಿ ಕುಟುಂಬ ಸದಸ್ಯರ ಜತೆಗೆ ಪ್ರದಕ್ಷಿಣೆ ಬಂದರು. ಈ ಸಂದರ್ಭದಲ್ಲಿ ಅವರ ಮೊಮ್ಮಗಳು ನಿಹಾರಿಕಾ ದುಃಖ ತಡೆಯಲಾರದೆ ಕಣ್ಣೀರಾದರು. ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತಿಮ ಸಂಸ್ಕಾರದ ವಿಧಿವಿಧಾನಗಳು ನಡೆದವು. ಅಂತಿಮ ಸಂಸ್ಕಾರ ನಡೆಸುವ ಮೊದಲು ಪಾರ್ಥಿವ ಶರೀರಕ್ಕೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಸರಕಾರದ ವತಿಯಿಂದ ಮೊಮ್ಮಗಳು ನಿಹಾರಿಕಾರಿಗೆ ಹಸ್ತಾಂತರಿಸಲಾಯಿತು.

ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳ ನದಿಗಳಲ್ಲಿ ಚಿತಾಭಸ್ಮಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಉತ್ತರ ಪ್ರದೇಶದ ಎಲ್ಲ  75 ಜಿಲ್ಲೆಗಳಲ್ಲಿರುವ ನದಿಗಳಲ್ಲಿ ವಿಸರ್ಜಿಸಲಾಗುತ್ತದೆ. ಈ ಬಗ್ಗೆ ಉತ್ತರ ಪ್ರದೇಶ ಸರಕಾರ ಶುಕ್ರವಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರ ಕರ್ಮಭೂಮಿ ಉತ್ತರ ಪ್ರದೇಶ ಆಗಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ರಾಜ್ಯದಿಂದ ಐದು ಬಾರಿ ಲೋಕಸಭೆಯನ್ನು ವಾಜಪೇಯಿ ಪ್ರತಿನಿಧಿಸಿದ್ದರು.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.