ಮೋದಿ ನವಭಾರತ ರೂಪಿಸಬಲ್ಲರು : ರತನ್ ಟಾಟಾ ವಿಶ್ವಾಸ
Team Udayavani, Sep 20, 2017, 7:06 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಹುವಾಗಿ ಪ್ರಶಂಸಿಸಿರುವ “ಟಾಟಾ ಸನ್ಸ್’ ಸಮೂಹದ ಅಧ್ಯಕ್ಷ ರತನ್ ಟಾಟಾ ಅವರು, “ಮೋದಿ ಅವರಿಗೆ ಭಾರತವನ್ನು ರೂಪಾಂತರಿಸುವ ಅವಕಾಶ ನೀಡಬೇಕು, ಏಕೆಂದರೆ ಅವರು ನವಭಾರತ ನಿರ್ಮಾಣದ ದೃಷ್ಟಾರತೆಯನ್ನು ಹೊಂದಿದ್ದಾರೆ’ ಎಂದು ಹೇಳಿದ್ದಾರೆ.
ಸಿಎನ್ಬಿಸಿ ಟಿವಿ 18 ವಾಣಿಜ್ಯ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ರತನ್ ಟಾಟಾ ಅವರು ಪ್ರಧಾನಿ ಮೋದಿ ಅವರ ಅತ್ಯಂತ ತ್ವರಿತ ಗತಿಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬಹುವಾಗಿ ಪ್ರಶಂಸಿಸಿದರು. ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಿನಿಂದಲೂ ನಾನು ಅವರ ಕಾರ್ಯ ವೈಖರಿ, ಆಡಳಿತ ದಕ್ಷತೆಗಳನ್ನು ಗಮನಿಸಿಕೊಂಡು ಬಂದಿದ್ದೇನೆ’ ಎಂದು ಹೇಳಿದರು
ಟಾಟಾ ನ್ಯಾನೋ ಕಾರ್ ಫ್ಯಾಕ್ಟರಿಯನ್ನು ಪಶ್ಚಿಮ ಬಂಗಾಲದಿಂದ ಗುಜರಾತ್ಗೆ ಸ್ಥಳಾಂತರಿಸುವುದಕ್ಕೆ ಕೇವಲ ಮೂರು ದಿನಗಳಲ್ಲಿ ಅಗತ್ಯವಿದ್ದ ಭೂಮಿಯನ್ನು ನೀಡಿ ನೆರವಾದ ಮೋದಿಯನ್ನು ರತನ್ ಟಾಟಾ ಕೃತಜ್ಞತೆಯಿಂದ ಸ್ಮರಿಸಿಕೊಂಡರು.
“ಪ್ರಧಾನಿ ಮೋದಿ ಅವರು ಭಾರತಕ್ಕೆ ಮತ್ತು ಭಾರತದ ಜನರಿಗೆ “ನವಭಾರತ’ದ ಕೊಡುಗೆ ನೀಡುವುದಾಗಿ ಹೇಳಿದ್ದಾರೆ. ಆದುದರಿಂದ ನಾವು ಅದಕ್ಕಾಗಿ ಅವರಿಗೊಂದು ಅವಕಾಶ ನೀಡಬೇಕು. ಮೋದಿ ಭಾರತವನ್ನು ಹೊಸದಾಗಿ ಕಾಣುವ ಸಾಮರ್ಥ್ಯ ಮತ್ತು ನವೋನ್ಮೆàಷತೆಯನ್ನು ಹೊಂದಿದ್ದಾರೆ. ಮೋದಿ ನಾಯಕತ್ವದಲ್ಲಿ ಭಾರತವು ನವಭಾರತವಾಗಿ ರೂಪುಗೊಳ್ಳುವ ವಿಶ್ವಾಸ ಮತ್ತು ಆಶಾವಾದವನ್ನು ನಾನು ಹೊಂದಿದ್ದೇನೆ’ ಎಂದು ರತನ್ ಟಾಟಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ