ದೇಶದ ನಗದು ಸ್ಥಿತಿ ಸುಧಾರಣೆ: ಕೇಂದ್ರ, ಬ್ಯಾಂಕ್ ಪ್ರತಿಪಾದನೆ
Team Udayavani, Apr 19, 2018, 6:00 AM IST
ಹೊಸದಿಲ್ಲಿ: ಕರ್ನಾಟಕ ಸಹಿತ ದೇಶದ ಹಲವು ಭಾಗಗಳಲ್ಲಿ ಉಂಟಾಗಿರುವ ನಗದು ಪೂರೈಕೆ ಕೊರತೆ ನಿಧಾನವಾಗಿ ಸುಧಾರಣೆಯಾಗುತ್ತಿದ್ದು, ದೇಶದ 2.2 ಲಕ್ಷ ಎಟಿಎಂಗಳ ಪೈಕಿ ಶೇ.80ರಷ್ಟು ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಸರಕಾರ ಬುಧವಾರ ಹೇಳಿದೆ.
ಆದರೆ ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಆಂಧ್ರಪ್ರದೇಶಗಳ ಕೆಲವು ಭಾಗಗಳಲ್ಲಿ ಎಟಿಎಂಗಳು ಕಾರ್ಯವೆಸುಗುತ್ತಿಲ್ಲ. ಕೇಂದ್ರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಸರಕಾರಿ ಸ್ವಾಮ್ಯದ ವಿವಿಧ ಬ್ಯಾಂಕ್ಗಳ ಮುಖ್ಯಸ್ಥರ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಪರಿಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. 500 ರೂ. ನೋಟುಗಳ ಪೂರೈಕೆಯನ್ನು ಇನ್ನಷ್ಟು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಬುಧವಾರ ಪರಿಸ್ಥಿತಿ ಶೇ.80ರಷ್ಟು ಸುಧಾರಿಸಿದೆ ಎಂದು ಎಸ್ಬಿಐ ಹೇಳಿದೆ.
ಇದೇ ವೇಳೆ ಎಸ್ಬಿಐನ ಸಂಶೋಧನ ವಿಭಾಗ ನಡೆಸಿದ ಅಧ್ಯಯನದ ಪ್ರಕಾರ, ದೇಶದಲ್ಲೀಗ 70 ಸಾವಿರ ಕೋಟಿ ರೂ. ನಗದು ಕೊರತೆ ಇದೆ. ಈ ಮೊತ್ತ ಎಟಿಎಂಗಳಿಂದ ಮಾಸಿಕ ವಿಥ್ಡ್ರಾ ಮಾಡುವ ಒಟ್ಟು ಮೊತ್ತದ ಮೂರನೇ ಒಂದು ಭಾಗಕ್ಕೆ ಸಮ. ಈ ಬಗ್ಗೆ ಅದು ಟಿಪ್ಪಣಿ ಸಿದ್ಧಪಡಿಸಿದೆ. ಸಾರ್ವಜನಿಕರಿಗೆ ದೊರೆಯುವ ನಗದು ಪ್ರಮಾಣ, ಡಿಜಿಟಲ್ ವಹಿವಾಟಿನಲ್ಲಿ ಹೆಚ್ಚಳ ಸಹಿತ ಹಲವು ಅಂಶಗಳನ್ನು ಗಮನದಲ್ಲಿರಿಸಿಕೊಂಡು ಟಿಪ್ಪಣಿ ಸಿದ್ಧಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ