ಮಾಲೇಗಾಂವ್ ಸ್ಫೋಟಕ ಪ್ರಕರಣ: ಉಲ್ಟಾ ಹೊಡೆದ ಸಾಕ್ಷಿ!
ಯೋಗಿ, ಆರೆಸ್ಸೆಸ್ ನಾಯಕರ ಹೆಸರು ಹೇಳುವಂತೆ ಒತ್ತಡ
Team Udayavani, Dec 29, 2021, 6:20 AM IST
ಮುಂಬಯಿ: 2008ರ ಮಾಲೇಗಾಂವ್ ಸ್ಫೋಟಕ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಉತ್ತರಪ್ರದೇಶದ ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರೆಸ್ಸೆಸ್ನ ನಾಲ್ವರು ನಾಯಕರ ಹೆಸರುಗಳನ್ನು ಹೇಳುವಂತೆ ಮಹಾರಾಷ್ಟ್ರ ಉಗ್ರ ನಿಗ್ರಹ ಪಡೆ(ಎಟಿಎಸ್) ನನ್ನ ಮೇಲೆ ಒತ್ತಡ ಹೇರಿತ್ತು ಎಂದು ಸಾಕ್ಷಿಯೊಬ್ಬರು ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮುಂಬಯಿನ ವಿಶೇಷ ಎನ್ಐಎ ಕೋರ್ಟ್ ಮುಂದೆ ಹಾಜರಾದ ಸಾಕ್ಷಿಯು, “ಆಗಿನ ಹಿರಿಯ ಎಟಿಎಸ್ ಅಧಿಕಾರಿಯಾಗಿದ್ದ ಪರಂಬೀರ್ ಸಿಂಗ್ ಮತ್ತು ಇನ್ನೊಬ್ಬ ಅಧಿಕಾರಿಯು ನನಗೆ ಚಿತ್ರಹಿಂಸೆ ನೀಡಿದ್ದರು. ಯೋಗಿ ಆದಿತ್ಯನಾಥ್, ಇಂದ್ರೇಶ್ ಕುಮಾರ್ ಸೇರಿದಂತೆ ನಾಲ್ವರು ಆರೆಸ್ಸೆಸ್ ನಾಯಕರ ಹೆಸರು ಹೇಳುವಂತೆ ಒತ್ತಡ ಹೇರಿದ್ದರು’ ಎಂದು ಹೇಳಿದ್ದಾರೆ. ಮಾಲೇಗಾಂವ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸುವ ಮುನ್ನ ಅದರ ತನಿಖೆಯನ್ನು ಮಹಾರಾಷ್ಟ್ರ ಎಟಿಎಸ್ ನಡೆಸುತ್ತಿತ್ತು. ಆಗಲೇ ಸಾಕ್ಷಿಗಳ ಹೇಳಿಕೆಗಳನ್ನೂ ದಾಖಲು ಮಾಡಲಾಗಿತ್ತು. ಆರಂಭದಲ್ಲಿ ಮಾಲೇಗಾಂವ್ ಸ್ಫೋಟ
ಪ್ರಕರಣದ ತನಿಖೆ ನಡೆಸುತ್ತಿದ್ದ ಮಹಾರಾಷ್ಟ್ರ ಎಟಿಎಸ್ಗೆ ಮುಂಬಯಿನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಹೆಚ್ಚುವರಿ ಆಯುಕ್ತರಾಗಿದ್ದರು. ಈಗ ಸಿಂಗ್ ಅವರು ಹಲವು ವಸೂಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ.
2008ರ ಸೆ.29ರಂದು ಮಾಲೇಗಾಂವ್ನ ಮಸೀದಿ ಮುಂದೆ ನಡೆದ ಸ್ಫೋಟದಲ್ಲಿ 6 ಮಂದಿ ಸಾವಿಗೀಡಾಗಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಇದನ್ನೂ ಓದಿ:ಚೀನಾ ಗಡಿಭಾಗದಲ್ಲಿ 27 ರಸ್ತೆ ನಿರ್ಮಾಣಕ್ಕೆ ಚಾಲನೆ : ರಕ್ಷಣಾ ಸಚಿವ ರಾಜನಾಥ್ ಸಿಂಗ್
ಸೋನಿಯಾ, ಸಿಂಗ್ ಕ್ಷಮೆ ಕೋರಲಿ: ಸಾಕ್ಷಿಯು ಕೋರ್ಟ್ನಲ್ಲಿ ನೀಡಿರುವ ಹೇಳಿಕೆ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್, “ಯುಪಿಎ ಸರಕಾರದ ಅವಧಿಯಲ್ಲಿ ಕೇಸರಿ ಭಯೋತ್ಪಾದನೆ ಎಂಬ ಸುಳ್ಳು ಆರೋಪ ಹೊರಿಸಿ ನಮ್ಮನ್ನು ಸಿಲುಕಿಸುವಂತೆ ಕಾಂಗ್ರೆಸ್ ಸಂಚು ರೂಪಿಸಿತ್ತು. ಈ ಮೂಲಕ ಕೀಳುಮಟ್ಟದ ರಾಜಕೀಯ ಮಾಡಿತ್ತು. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವರ್ಚಸ್ಸಿಗೆ ಧಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಿಯಾಂಕಾ ವಾದ್ರಾ, ದಿಗ್ವಿಜಯ್ ಸಿಂಗ್, ಸಲ್ಮಾನ್ ಖುರ್ಷಿದ್ ಕೂಡಲೇ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ