ಶಂಕಿತ ಉಗ್ರನಿಗಿತ್ತು ವಿದೇಶಿ ಸಂಪರ್ಕ : ಭಯೋತ್ಪಾದನೆ ನಿಗ್ರಹ ದಳ ಮಾಹಿತಿ
Team Udayavani, Sep 20, 2021, 10:30 PM IST
ಮುಂಬೈ: ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಝಾಕಿರ್ ಹುಸೇನ್ ಶೇಖ್ಗೆ ವಿದೇಶದಿಂದ ಸೂಚನೆಗಳು ಬರುತ್ತಿದ್ದವು ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಜೋಗೇಶ್ವರಿ ಉಪನಗರದಿಂದ ಶುಕ್ರವಾರ ಬಂಧಿಸಲಾಗಿರುವ ಝಾಕಿರ್ಗೆ ಆಂಥೋನಿ ಅಲಿಯಾಸ್ ಅನ್ವರ್ ಅಲಿಯಾಸ್ ಅನಸ್ ಹೆಸರಿನ ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕವಿತ್ತು. ಮಹಾರಾಷ್ಟ್ರದ ವಿವಿಧೆಡೆ ಭಯೋತ್ಪಾದಕ ದಾಳಿ ನಡೆಸಲು ಆ ವಿದೇಶಿ ವ್ಯಕ್ತಿ ಈತನಿಗೆ ಸೂಚಿಸುತ್ತಿದ್ದ ಎಂದು ನ್ಯಾಯಾಲಯಕ್ಕೆ ಎಟಿಎಸ್ ತಿಳಿಸಿದೆ. ಝಾಕಿರ್ನನ್ನು ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಕಳೆದ ವಾರ ಮೂರು ರಾಜ್ಯಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರು 6 ಮಂದಿಯನ್ನು ಬಂಧಿಸಿದ್ದರು. ಅವರೊಂದಿಗೆ ಝಾಕಿರ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನೂ ಬಂಧಿಸಲಾಗಿತ್ತು.
ಝಾಕಿರ್ ನೀಡಿದ ಮಾಹಿತಿಯನ್ನಾಧರಿಸಿ ಮುಂದ್ರಾ ಪ್ರದೇಶದಿಂದ ಮತ್ತೂಬ್ಬನನ್ನು ಶನಿವಾರ ಬಂಧಿಸಿದ್ದ ಎಟಿಎಸ್, ಆತ ಚರಂಡಿಯಲ್ಲಿ ಎಸೆದಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದೆ. ಮೊಬೈಲ್ ಹಾಳುಗೆಡವಿ ಎಸೆಯಲಾಗಿದ್ದು, ಅದು ಮೂರು ಭಾಗವಾಗಿ ಸಿಕ್ಕಿದೆಯೆಂದು ಹೇಳಲಾಗಿದೆ.
ಇದನ್ನೂ ಓದಿ :ವಿದೇಶಗಳಿಗೆ ಮತ್ತೆ “ಲಸಿಕೆ ಮಿತ್ರತ್ವ’ : ಮುಂದಿನ ತಿಂಗಳಿಂದ ಲಸಿಕೆ ರಫ್ತು ಶುರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ