ಬಿಹಾರ ಗಡಿಯಲ್ಲಿ ಭಾರತೀಯ ನಾಗರಿಕರ ಮೇಲೆ ನೇಪಾಳಿ ಪೊಳೀಸರ ಗುಂಡಿನ ದಾಳಿ
Team Udayavani, Jul 20, 2020, 9:55 AM IST
ಪಾಟ್ನಾ: ನೆರೆ ರಾಷ್ಟ್ರ ನೇಪಾಳದ ಗಡಿ ತಂಟೆ ಮತ್ತೆ ಮುಂದುವರಿದಿದೆ. ಬಿಹಾರ ರಾಜ್ಯದ ಕಿಶನ್ ಗಂಜ್ ಗಡಿಭಾಗದಲ್ಲಿ ನೇಪಾಳ ಪೊಳೀಸರು ಭಾರತೀಯ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಭಾರತೀಯ ಗಾಯಗೊಂಡಿದ್ದಾನೆ.
ಭಾರತೀಯ ಭೂಭಾಗವನ್ನು ತನ್ನದೆಂದು ಹೇಳಿಕೊಂಡು ನಕ್ಷೆ ರಚಿಸಿ ಗಡಿ ತಂಟೆ ಆರಂಭಿಸಿರುವ ನೇಪಾಳ, ಭಾರತೀಯರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಮತ್ತೊಂದು ಕಿರಿಕ್ ಆರಂಭಿಸಿದೆ. ಇದು ಒಂದು ತಿಂಗಳ ಅಂತರದಲ್ಲಿ ನಡೆದ ಎರಡನೇ ಗುಂಡಿನ ದಾಳಿ. ಕಳೆದ ಬಾರಿ ಸೀತಾಮಡಿ ಎಂಬ ಪ್ರದೇಶದಲ್ಲಿ ನೇಪಾಳ ಪೊಲೀಸರ ದಾಳಿಗೆ ಓರ್ವ ಭಾರತೀಯ ಬಲಿಯಾಗಿದ್ದರು. ಇಬ್ಬರು ಗಾಯಗೊಂಡಿದ್ದರು.
ರವಿವಾರ ಕಿಶನ್ ಗಂಜ್ ಬಡಿ ಪ್ರದೇಶದಲ್ಲಿ ಮೂವರು ಭಾರತೀಯರ ಮೇಲೆ ನೇಪಾಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ತಪ್ಪಿಸಿಕೊಂಡಿದ್ದು, ಓರ್ವ ಗಾಯಗೊಂಡಿದ್ದಾರೆ. ಕಿಶನ್ ಗಂಜ್ ಪೊಲೀಸ್ ವರಿಷ್ಠಾಧಿಕಾರಿ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ