ಗುಜರಾತ್ನಲ್ಲಿ ರಾಹುಲ್ ಕಾರಿಗೆ ಕಲ್ಲೆಸೆತ: ಬಿಜೆಪಿ ನಾಯಕ ಅರೆಸ್ಟ್
Team Udayavani, Aug 5, 2017, 4:34 PM IST
ಹೊಸದಿಲ್ಲಿ : ಗುಜರಾತ್ನ ಬನಾಸ್ಕಾಂತಾ ಜಿಲ್ಲೆಯ ಧನೇರಾ ಪಟ್ಟಣದಲ್ಲಿ ನಿನ್ನೆ ಪ್ರವಾಹ ಪೀಡಿತರನ್ನು ಭೇಟಿಯಾಗಿ ಸಾಂತ್ವನ ಹೇಳಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಬಂದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕರಿ ಪತಾಕೆ ತೋರಿಸಿ, ಪ್ರಧಾನಿ ಮೋದಿ ಪರ ಘೋಷಣೆ ಕೂಗಿ, ರಾಹುಲ್ ಕಾರಿಗೆ ಕಲ್ಲೆಸೆಯಲಾದ ಘಟನೆಯಲ್ಲಿ ಶಾಮೀಲಾದ ಆರೋಪದ ಮೇಲೆ ಪೊಲೀಸರು ಸ್ಥಳೀಯ ಬಿಜೆಪಿ ನಾಯಕ ಜಯೇಶ್ ದಾರ್ಜಿ ಎಂಬವರನ್ನು ಬಂಧಿಸಿದ್ದಾರೆ.
ಬಿಜೆಪಿ ನಾಯಕ ಜಯೇಶ್ ದಾರ್ಜಿ ಅವರು ರಾಹುಲ್ ಗಾಂಧಿ ಕಾರಿನ ಮೇಲೆ ನಡೆಸಲಾದ ಕಲ್ಲೆಸೆತದ ದಾಳಿಯಲ್ಲಿ ಶಾಮೀಲಾಗಿದ್ದರು ಎಂದು ಸ್ಥಳೀಯ ಕಾಂಗ್ರೆಸ್ ಆರೋಪಿಸಿತ್ತು.
ರಾಹುಲ್ ಗಾಂಧಿ ಕಾರಿನ ಮೇಲಿನ ದಾಳಿ ಘಟನೆಗೆ ಸಂಬಂಧಿಸಿ ಈ ತನಕವೂ ಪೊಲೀಸರು ಎಫ್ಐಆರ್ ದಾಖಲಿಸದಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪ್ರಧಾನ ಕಾರ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದರು.
“ಹೀಗೆ ಪ್ರತಿಭಟಿಸಿ ಸಮಯ ವ್ಯರ್ಥ ಮಾಡುವ ಬದಲು ನೀವು ಪ್ರವಾಹ ಪೀಡಿತರಿಗೆ ನೆರವಾಗುವ ಕೆಲಸ ಮಾಡಿ’ ಎಂದು ರಾಹುಲ್ ಗಾಂಧಿ, ಪ್ರತಿಭಟನೆ ನಿರತ ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಿದರು.
ಹಲ್ಲೆ ಘಟನೆಯನ್ನು ಖಂಡಿಸಿ ಪ್ರಧಾನಿ ಮೋದಿ ಈ ವರೆಗೆ ಯಾವುದೇ ಹೇಳಿಕೆ ಕೊಟ್ಟಿಲ್ಲವಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ, “ಇದರಲ್ಲಿ ಶಾಮೀಲಾದವರೇ ಅದನ್ನು ಹೇಗೆ ಖಂಡಿಸಬಲ್ಲರು; ಇದು ಮೋದಿ ಜೀ, ಬಿಜೆಪಿ, ಆರ್ಎಸ್ಎಸ್ ನವರ ರಾಜಕಾರಣದ ಶೈಲಿ; ಅದರ ಬಗ್ಗೆ ಯಾರಾದರೂ ಏನನ್ನು ತಾನೇ ಹೇಳಬಹುದು ?’ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು