ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರ ಬೆಂಗಾವಲು ಪಡೆ ಮೇಲೆ ದಾಳಿ
Team Udayavani, Feb 25, 2023, 4:55 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬಿಹಾರದಲ್ಲಿ ಕೇಂದ್ರ ಸಚಿವ ನಿಶಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಶನಿವಾರ ನಡೆದಿದೆ.
ಸಚಿವರ ಕಾರಿನ ಗಾಜುಗಳಿಗೆ ಹಾನಿಯಾಗಿದೆ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲಿನ ತೂರಾಟ ಮಾಡಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.
ಜನರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಬೇಕಾಯಿತು. ನಿಶಿತ್ ಪ್ರಮಾಣಿಕ್ ಅವರು ಕೂಚ್ ಬಿಹಾರ್ ನ ಸಂಸದರಾಗಿದ್ದಾರೆ. “ಇಲ್ಲಿ ಸಚಿವರಿಗೆ ರಕ್ಷಣೆಯಿಲ್ಲ. ಇನ್ನು ಸಾಮಾನ್ಯ ಜನರ ಗತಿಯನ್ನು ಅಂದಾಜಿಸಿ. ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ” ಎಂದು ಅವರು ಹೇಳಿಕೊಂಡಿದ್ದಾರೆ.
ನಿಶಿತ್ ಪ್ರಮಾಣಿಕ್ ಅವರು ಸ್ಥಳೀಯ ಬಿಜೆಪಿ ಕಚೇರಿಗೆ ತೆರಳುತ್ತಿದ್ದರು. ಬಿಎಸ್ಎಫ್ ಪಡೆಗಳಿಂದ ಬುಡಕಟ್ಟು ಜನರ ಹತ್ಯೆಯ ಕುರಿತು ಸ್ಥಳೀಯ ಜನರಿಗೆ ಪ್ರಮಾಣಿಕ್ ಅವರ ಮೇಲೆ ಆಕ್ರೋಶವಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ